ನವದೆಹಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಹಿಂಬದಿಯಿಂದ ಡಿಕೆ ಸುರೇಶ್ ತಳ್ಳಿದ ಪೊಲೀಸ್- ವಿಡಿಯೋ

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರ ವಿಚಾರಣೆ ಎರಡನೇ ದಿನವಾದ ಇಂದು ಕೂಡಾ ಮುಂದುವರೆದಿದ್ದು, ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ. ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್  ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸರೊಂದಿಗೆ ಡಿಕೆ ಸುರೇಶ್ ಮಾತಿನ ಚಕಮಕಿ
ಪೊಲೀಸರೊಂದಿಗೆ ಡಿಕೆ ಸುರೇಶ್ ಮಾತಿನ ಚಕಮಕಿ
Updated on

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್​​ ನಾಯಕ ರಾಹುಲ್​​ ಗಾಂಧಿ ಅವರ ವಿಚಾರಣೆ ಎರಡನೇ ದಿನವಾದ ಇಂದು ಕೂಡಾ ಮುಂದುವರೆದಿದ್ದು, ಅವರನ್ನು ಭೇಟಿ ಮಾಡಲು ಹೊರಟ ಸಂಸದ ಡಿ. ಕೆ. ಸುರೇಶ್, ಮಾಜಿ ಸಚಿವ ದಿನೇಶ್ ಗುಂಡೂರಾವ್  ಮತ್ತಿತರ ಕಾಂಗ್ರೆಸ್ ಮುಖಂಡರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಕಚೇರಿಗೆ ಹೊರಟ ಈ ನಾಯಕರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ಡಿ. ಕೆ. ಸುರೇಶ್ ಹಾಗೂ ಪೊಲೀಸರೊಂದಿಗೆ ವಾಗ್ವಾದ, ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆದಿದೆ. ಪೊಲೀಸರೊಬ್ಬರು ಹಿಂಬದಿಯಿಂದ ತಳ್ಳಿದ್ದಾರೆ. ಬಳಿಕ ಬಸ್ಸಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ , ಬಿಜೆಪಿ ಸರ್ಕಾರದ ವಿರುದ್ಧ ಹೋರಾಟ ಮತ್ತೊಮ್ಮೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧದ ಹೋರಾಟವನ್ನು ನೆನಪಿಸುತ್ತಿದೆ. ಹೋರಾಡುತ್ತೇವೆ.  ದೇಶವನ್ನು ಫ್ಯಾಸಿಸ್ಟ್ ಶಕ್ತಿಗಳಿಂದ ಮುಕ್ತಗೊಳಿಸುತ್ತೇವೆ. ಆ ಬದ್ಧತೆ ನಮಗಿದೆ ಎಂದು ಟ್ವೀಟ್ ನಲ್ಲಿ ಹೇಳಿದೆ. ಜನಪ್ರತಿನಿಧಿಗಳೊಂದಿಗೆ ಪೊಲೀಸರ ಈ ನಡವಳಿಕೆ ಪ್ರಜಾಪ್ರಭುತ್ವವನ್ನು ಅಣಕಿಸುವಂತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com