ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ನಮಗಾದ ದ್ರೋಹವನ್ನು ಎಂದಿಗೂ ಮರೆಯೋಲ್ಲ; ಆದಿತ್ಯ ಠಾಕ್ರೆ

ಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ.
ಆದಿತ್ಯ ಠಾಕ್ರೆ
ಆದಿತ್ಯ ಠಾಕ್ರೆ

ಮುಂಬೈ: ಇದು ಸತ್ಯ ಸುಳ್ಳುಗಳ ಯುದ್ಧವಾಗಿದ್ದು, ಸತ್ಯಕ್ಕೆ ಜಯ ಸಿಕ್ಕೇ ಸಿಗುತ್ತದೆ. ನಾವು ಗೆಲ್ಲುತ್ತೇವೆ. ಆದರೆ, ನಮಗಾದ ದ್ರೋಹವನ್ನು ಎಂದಿಗೂ ಮರೆಯುವುದಿಲ್ಲ ಎಂದು ಶಿವಸೇನೆ ನಾಯಕ ಮತ್ತು ಮಹಾರಾಷ್ಟ್ರ ಸಚಿವ ಆದಿತ್ಯ ಠಾಕ್ರೆ ಅವರು ಶನಿವಾರ ಹೇಳಿದ್ದಾರೆ. 

ಶಿವಸೇನೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಒಂದು ವೇಳೆ ನಾವು ಶಿವಸೇನೆ ಇಲ್ಲದೆ ಅಧಿಕಾರಕ್ಕೆ ಬರಲು ಸಿದ್ಧವಿದ್ದರೆ ನಿಮ್ಮೊಂದಿಗೆ ಹೋರಾಡಲು ನಾವೂ ಸಿದ್ಧರಿದ್ದೇವೆ. ದೇಶದ್ರೋಹಿಗಳು ಯಾವುದೇ ಕಾರಣಕ್ಕೂ ಗೆಲ್ಲಲು ನಾವು ಬಿಡುವುದಿಲ್ಲ. ಶಾಸಕರು ಬಂಡಾಯವೆದ್ದ ಬಳಿಕ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಉದ್ಧವ್ ಠಾಕ್ರೆಯವರೊಂದಿಗೆ ಮಾತುಕತೆ ನಡೆಸಿದ್ದಾರೆಂದು ಹೇಳಿದರು. 

ರಾಜ್ಯದಿಂದ ಹೊರ ರಾಜ್ಯಕ್ಕೆ ಬಲವಂತವಾಗಿ ಕರೆದೊಯ್ದ ನಮ್ಮ ಶಾಸಕರಿಗೆ ಲಕ್ಷಗಟ್ಟಲೆ ಹಣ ಖರ್ಚು ಮಾಡಲಾಗುತ್ತಿದೆ. ದಿನಕ್ಕೆ 9 ಲಕ್ಷ ರೂ ಖರ್ಚು ಮಾಡಲಾಗುತ್ತಿದೆ. ಬಂಡಾಯ ಶಾಸಕರಿರುವ ಅದೇ ಅಸ್ಸಾಂನಲ್ಲಿ ಲಕ್ಷಾಂತರ ಪ್ರವಾಹ ಪೀಡಿತ ಜನರಿದ್ದಾರೆ, ಮೊದಲ ಬಾರಿಗೆ, ವಿರೋಧ ಪಕ್ಷವು ಆಡಳಿತ ಪಕ್ಷವನ್ನು ತೊರೆಯುವ ಬಣವನ್ನು ಬೆಂಬಲಿಸುತ್ತಿದೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಕಳೆದ 2-4 ದಿನಗಳ ಬೆಳವಣಿಗೆಯನ್ನು ನೋಡಿದಾಗ, ಹೋದವರು ಒಳ್ಳೆಯದಕ್ಕಾಗಿ ಹೊರಟುಹೋದರು ಎಂದು ಭಾಸವಾಗುತ್ತಿದೆ... ಕೋವಿಡ್-19 ಸಮಯದಲ್ಲಿ ಅತ್ಯಂತ ಶಕ್ತಿಶಾಲಿಯಾಗಿ ಕೆಲಸ ಮಾಡಿದ ವ್ಯಕ್ತಿ ತಮ್ಮ ಅಧಿಕೃತ ನಿವಾಸವನ್ನು ತೊರೆಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com