ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಕುಸಿತ; ವಾಯುಮಾಲಿನ್ಯ ಕಡಿತಗೊಳಿಸಲು ಮನೆಯಿಂದಲೇ ಕೆಲಸ ಮಾಡಿ ಎಂದ ಸಚಿವ ಗೋಪಾಲ್ ರೈ

ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.
ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ
ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ
Updated on

ನವದೆಹಲಿ: ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಪ್ರಮುಖ ಕೊಡುಗೆ ನೀಡುವ ವಾಹನ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮನೆಯಿಂದಲೇ ಕೆಲಸ ಮಾಡಲು ಮತ್ತು ಹಂಚಿಕೆಯ ಸಾರಿಗೆಯನ್ನು ಬಳಸುವಂತೆ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಬುಧವಾರ ಹೇಳಿದರು.

ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಹುಲ್ಲು ಸುಡುವಿಕೆಗೆ ಪಂಜಾಬ್‌ನಲ್ಲಿನ ರೈತರನ್ನು ಬಿಜೆಪಿ ಗುರಿಯಾಗಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಬೆಳೆಯ ಉಳಿಕೆಯನ್ನು ಸುಡದಿರಲು ರೈತರಿಗೆ ನಗದು ಪ್ರೋತ್ಸಾಹ ನೀಡುವ ರಾಜ್ಯ ಸರ್ಕಾರದ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಬೆಂಬಲಿಸದ ಕಾರಣದಿಂದಲೇ ಪಂಜಾಬ್‌ನಲ್ಲಿ ರೈತರು ಹುಲ್ಲು ಸುಡಲು ಪ್ರಮುಖ ಕಾರಣವಾಗಿದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಹೇಳಿದ್ದಾರೆ.

'ರೈತರು ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಿದ್ದಕ್ಕಾಗಿ ಕೃಷಿ ತ್ಯಾಜ್ಯವನ್ನು ಸುಟ್ಟು ಹಾಕುತ್ತಿದ್ದಾರೆ ಎಂದು ಬಿಜೆಪಿಯವರು ದೂರುತ್ತಿದ್ದಾರೆ. ಈಗ ಅವರ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅವರು ರೈತರನ್ನು ನಿಂದಿಸುವುದನ್ನು ಮತ್ತು ಸೇಡು ತೀರಿಸಿಕೊಳ್ಳುವುದನ್ನು ನಿಲ್ಲಿಸಬೇಕು' ಎಂದು ರೈ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

'ವಾಯು ಮಾಲಿನ್ಯ ಸಮಸ್ಯೆಯನ್ನು ರಾಜಕೀಯದ ಮೂಲಕ ಬಗೆಹರಿಸಲು ಸಾಧ್ಯವಿಲ್ಲ. ವಾಯು ಗುಣಮಟ್ಟ ನಿರ್ವಹಣೆ ಆಯೋಗವು (CAQM) ಒಂದು ಯೋಜನೆಯನ್ನು ರೂಪಿಸಿದೆ. ಇದನ್ನು ಉತ್ತರ ಪ್ರದೇಶ ಮತ್ತು ಹರಿಯಾಣದ ಗಾಜಿಯಾಬಾದ್, ನೋಯ್ಡಾ, ಗ್ರೇಟರ್ ನೋಯ್ಡಾ, ಗುರುಗ್ರಾಮ ಮತ್ತು ಬಹದ್ದೂರ್‌ಗಢದಲ್ಲಿ ಜಾರಿಗೆ ತರಬೇಕಾಗುತ್ತದೆ' ಎಂದರು.

'ಸೆಂಟರ್ ಫಾರ್ ಸೈನ್ಸ್ ಅಂಡ್ ಎನ್ವಿರಾನ್‌ಮೆಂಟ್ (ಸಿಎಸ್‌ಇ) ನಡೆಸಿದ ಅಧ್ಯಯನದ ಪ್ರಕಾರ, ದೆಹಲಿಯಲ್ಲಿ ಶೇ 69ರಷ್ಟು ವಾಯು ಮಾಲಿನ್ಯವು ಹೊರಗಿನಿಂದ ಬರುತ್ತದೆ' ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com