ಜ್ಞಾನವಾಪಿ ಶಿವಲಿಂಗದ ಪೂಜೆ ವಿರುದ್ಧ ಮುಸ್ಲಿಂ ಸಂಘಟನೆ ಸಲ್ಲಿಸಿದ್ದ ಅರ್ಜಿ ವಜಾ: ವಾರಣಾಸಿ ಕೋರ್ಟ್

ಜ್ಞಾನವಾಪಿ ಮಸೀದಿಯಲ್ಲಿರುವ ಶಿವಲಿಂಗ ಪೂಜೆಗೆ ಅನುಮತಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಕೋರ್ಟ್ ವಜಾಗೊಳಿಸಿದೆ.
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ
Updated on

ವಾರಣಾಸಿ: ಜ್ಞಾನವಾಪಿ ಮಸೀದಿಯಲ್ಲಿರುವ ಶಿವಲಿಂಗ ಪೂಜೆಗೆ ಅನುಮತಿ ಸಲ್ಲಿಸಲಾಗಿರುವ ಅರ್ಜಿಯನ್ನು ವಜಾಗೊಳಿಸುವಂತೆ ಮುಸ್ಲಿಂ ಸಂಘಟನೆಗಳು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ಕೋರ್ಟ್ ವಜಾಗೊಳಿಸಿದೆ.

ವಾರಣಾಸಿಯ ತ್ವರಿತ ನ್ಯಾಯಾಲಯವು ಗುರುವಾರ ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿಯ ಮನವಿಯನ್ನು ವಜಾಗೊಳಿಸಿದ್ದು, ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದಿರುವ 'ಶಿವಲಿಂಗ'ವನ್ನು ಪೂಜಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಲು ನಿರ್ಧರಿಸಿದೆ.

ಜ್ಞಾನವಾಪಿ ಮಸೀದಿ ಆವರಣದಲ್ಲಿ ಕಂಡುಬಂದಿರುವ 'ಶಿವಲಿಂಗ'ಕ್ಕೆ ಪೂಜೆಯ ಹಕ್ಕು ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿದೆ. ಶಿವಲಿಂಗ ಪತ್ತೆಯಾದ ನಂತರ ವಿಶ್ವ ವೈದಿಕ ಸನಾತನ ಸಂಸ್ಥೆ ವಾರಣಾಸಿಯ ತ್ವರಿತ ನ್ಯಾಯಾಲಯದಲ್ಲಿ ಪ್ರತ್ಯೇಕ ಅರ್ಜಿ ಸಲ್ಲಿಸಿತ್ತು. ವಿಶ್ವ ವೈದಿಕ ಸನಾತನ ಸಂಸ್ಥೆಯ ಅಧ್ಯಕ್ಷ ಜಿತೇಂದ್ರ ಸಿಂಗ್ ವಿಶೆನ್ ಅವರ ಪತ್ನಿ ಕಿರಣ್ ಸಿಂಗ್ ಮತ್ತು ಇತರರು ಅರ್ಜಿ ಸಲ್ಲಿಸಿದ್ದಾರೆ. ಶಿವಲಿಂಗ ಪ್ರಾರ್ಥನೆಯನ್ನು ತಕ್ಷಣವೇ ಪ್ರಾರಂಭಿಸಲು ಅನುಮತಿ ನೀಡುವುದು, ಸಂಪೂರ್ಣ ಜ್ಞಾನವಾಪಿ ಸಂಕೀರ್ಣವನ್ನು ಹಿಂದೂಗಳಿಗೆ ಹಸ್ತಾಂತರಿಸುವುದು ಮತ್ತು ಜ್ಞಾನವಾಪಿ ಸಂಕೀರ್ಣದ ಆವರಣದೊಳಗೆ ಮುಸ್ಲಿಮರ ಪ್ರವೇಶವನ್ನು ನಿಷೇಧಿಸುವುದು ಹಿಂದೂಗಳ ಕಡೆಯ ಬೇಡಿಕೆಗಳಾಗಿವೆ.

ಈ ಬೇಡಿಕಗಳನ್ನು ವಿರೋಧಿಸಿ, ಜ್ಞಾನವಾಪಿ ಮಸೀದಿ ಆವರಣವನ್ನು ಹಿಂದೂಗಳ ಪರವಾಗಿ ಹಸ್ತಾಂತರಿಸುವ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಮಿಯಾ ಮಸೀದಿ ಸಮಿತಿ ಮೇಲ್ಮನವಿ ಸಲ್ಲಿಸಿತ್ತು. ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ದಾವೆಯ ನಿರ್ವಹಣೆಯನ್ನು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ ಮನವಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ. ಅಂತೆಯೇ ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯ ಡಿಸೆಂಬರ್ 2ಕ್ಕೆ ಮುಂದೂಡಿದೆ.

ಪ್ರಕರಣ ನ್ಯಾಯಾಲಯದಲ್ಲಿ ನಡೆಯುವವರೆಗೆ ಮುಸ್ಲಿಮರಿಗೆ ಆವರಣದಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ನ್ಯಾಯಾಲಯದ ಸಮೀಕ್ಷೆಯ ಸಮಯದಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ 'ಶಿವಲಿಂಗ' ಪತ್ತೆಯಾದ ಪ್ರದೇಶವನ್ನು ರಕ್ಷಿಸಲು ಸುಪ್ರೀಂ ಕೋರ್ಟ್ ನವೆಂಬರ್ 11 ರಂದು ತನ್ನ ಹಿಂದಿನ ಆದೇಶವನ್ನು ವಿಸ್ತರಿಸಿತು. ವಾರಣಾಸಿ ನ್ಯಾಯಾಲಯದಲ್ಲಿ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ, 'ಶಿವಲಿಂಗ'ದ 'ವೈಜ್ಞಾನಿಕ ತನಿಖೆ'ಗೆ ಅವಕಾಶ ನೀಡಲು ನಿರಾಕರಿಸಿತ್ತು.

ಹಿಂದೂಗಳ ಕಡೆಯವರು ತಾವು ಶಿವಲಿಂಗವೆಂದು ಹೇಳಿಕೊಳ್ಳುವ ರಚನೆಯ ಕಾರ್ಬನ್ ಡೇಟಿಂಗ್‌ಗೆ ಒತ್ತಾಯಿಸಿದ್ದರು. 'ಶಿವಲಿಂಗ' ಎಂದು ಹೇಳಿಕೊಂಡ ವಸ್ತುವಿನ ಕಾರ್ಬನ್ ಡೇಟಿಂಗ್ ಕೋರಿ ಹಿಂದೂ ಕಡೆಯವರು ಸೆಪ್ಟೆಂಬರ್ 22 ರಂದು ವಾರಣಾಸಿ ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.ಆದರೆ, ಸಿಕ್ಕಿದ್ದು ಕಾರಂಜಿ ಎಂದು ಮುಸ್ಲಿಂ ಕಡೆಯವರು ಹೇಳಿದ್ದಾರೆ ಎಂದು ಹಿಂದೂ ಪರ ವಕೀಲ ಅನುಪಮ್ ದ್ವಿವೇದಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com