ಕೇರಳ: ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ; 20 ಮಂದಿಗೆ ಗಾಯ, 8 ವರ್ಷದ ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ

ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.
ಆಂಧ್ರ ಪ್ರದೇಶದಿಂದ ಶಬರಿಮಲೆ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ
ಆಂಧ್ರ ಪ್ರದೇಶದಿಂದ ಶಬರಿಮಲೆ ಯಾತ್ರಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿ
Updated on

ಪತ್ತನಂತಿಟ್ಟ: ಆಂಧ್ರಪ್ರದೇಶದಿಂದ ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿ ಬಾಲಕ ಸೇರಿದಂತೆ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಶನಿವಾರ ಜಿಲ್ಲೆಯ ಲಾಹಾ ಬಳಿ ನಡೆದಿದೆ.

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 44 ಯಾತ್ರಾರ್ಥಿಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡ 8 ವರ್ಷದ ಬಾಲಕ ಸೇರಿದಂತೆ ಮೂವರನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು, 18 ಮಂದಿಯನ್ನು ಇಲ್ಲಿನ ಜನರಲ್ ಆಸ್ಪತ್ರೆಗೆ ಮತ್ತು ಉಳಿದವರನ್ನು ಸಮೀಪದ ಪೆರಿನಾಡು ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ, ಮೋಟಾರು ವಾಹನ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯರು ಜಂಟಿಯಾಗಿ ಕ್ಷಿಪ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರಿಂದ ಅಪಘಾತದ ತೀವ್ರತೆ ಕಡಿಮೆಯಾಗಿದೆ.

ಸ್ಥಳಕ್ಕಾಗಮಿಸಿದ ಆರೋಗ್ಯ ಸಚಿವೆ ವೀಣಾ ಜಾರ್ಜ್, ರಕ್ಷಣಾ ಕಾರ್ಯಾಚರಣೆ ಹಾಗೂ ಯಾತ್ರಾರ್ಥಿಗಳ ಹೆಚ್ಚಿನ ಚಿಕಿತ್ಸೆಗೆ ವ್ಯವಸ್ಥೆ ಮಾಡಿದರು. ಬಳಿಕ ಮಾತನಾಡಿದ ಅವರು, ಗಾಯಗೊಂಡ ಎಲ್ಲರಿಗೂ ಅಗತ್ಯ ಚಿಕಿತ್ಸೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com