ಪುಣೆ-ಬೆಂಗಳೂರು ಹೆದ್ದಾರಿ ಅಪಘಾತ ಪ್ರಕರಣ: ತನಿಖೆಗೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆದೇಶ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತನಿಖೆಗೆ ಆದೇಶಿಸಿದ್ದಾರೆ.
ಸಿಎಂ ಏಕನಾಥ್ ಶಿಂಧೆ
ಸಿಎಂ ಏಕನಾಥ್ ಶಿಂಧೆ
Updated on

ಪುಣೆ (ಮಹಾರಾಷ್ಟ್ರ): ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ಸಂಜೆ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆಯವರು ತನಿಖೆಗೆ ಆದೇಶಿಸಿದ್ದಾರೆ.

ನಿನ್ನೆ ಸಂಜೆ ಸಂಭವಿಸಿದ ಭೀಕರ ಅಪಘಾತದಲ್ಲಿ 40ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದವು. ಘಟನೆಯಲ್ಲಿ 38 ಮಂದಿ ಗಾಯಗೊಂಡಿದ್ದರು.

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮಹಾರಾಷ್ಟ್ರ ಏಕನಾಥ್ ಶಿಂಧೆಯವರು, ಅಪಘಾತದ ಮಾಹಿತಿ ತಿಳಿದ ಕೂಡಲೇ, ಘಟನೆಗೆ ನಿಖರವಾದ ಕಾರಣವನ್ನು ಕಂಡುಹಿಡಿಯುವಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸ್ಥಳೀಯ ಆಡಳಿತ ಮಂಡಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com