ನವದೆಹಲಿ: ನೇಣು ಬಿಗಿದ ಸ್ಥಿತಿಯಲ್ಲಿ ಎಎಪಿ ಮುಖಂಡ ಸಂದೀಪ್ ಭಾರದ್ವಾಜ್ ಪತ್ತೆ

ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಎಪಿ ಟ್ರೇಡ್ ವಿಭಾಗದ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ (55) ಪಶ್ಚಿಮ ದೆಹಲಿಯ ರೌಜೌರಿ ಗಾರ್ಡನ್ ನಲ್ಲಿರುವ ತನ್ನ ಮನೆಯಲ್ಲಿನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಯೊಂದಕ್ಕೆ ಸಾಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  
ಎಎಪಿ ಮುಖಂಡ ಸಂದೀಪ್ ಭಾರದ್ವಾಜ್
ಎಎಪಿ ಮುಖಂಡ ಸಂದೀಪ್ ಭಾರದ್ವಾಜ್
Updated on

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎಎಪಿ ಟ್ರೇಡ್ ವಿಭಾಗದ ಕಾರ್ಯದರ್ಶಿ ಸಂದೀಪ್ ಭಾರದ್ವಾಜ್ (55) ಪಶ್ಚಿಮ ದೆಹಲಿಯ ರೌಜೌರಿ ಗಾರ್ಡನ್ ನಲ್ಲಿರುವ ತನ್ನ ಮನೆಯಲ್ಲಿ
ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರ ಸ್ನೇಹಿತರು ಆಸ್ಪತ್ರೆಯೊಂದಕ್ಕೆ ಸಾಗಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.  

ಸಂದೀಪ್ ಭಾರದ್ವಾಜ್ ಅವರ ಮೃತದೇಹವನ್ನು ಮನೆಯಿಂದ ತರಲಾಗಿದೆ ಎಂದು ಆಸ್ಪತ್ರೆಯವರು ಪೊಲೀಸರಿಗೆ ಹೇಳಿರುವುದಾಗಿ ಡಿಸಿಪಿ ಘನಶ್ಯಾಮ್ ಬನ್ಸಾಲ್ ಹೇಳಿದ್ದಾರೆ. ಅಪರಾಧ ತಂಡ ಸ್ಥಳಕ್ಕೆ ಧಾವಿಸಿದ್ದು, ಸಿಆರ್ ಪಿಸಿ ಸೆಕ್ಷನ್ 174 ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆ ನಡೆಸುತ್ತಿದೆ.

ಮೃತ ಭಾರದ್ವಾಜ್ ಮಾರ್ಬಲ್ಸ್ ಮಾಲೀಕರಾಗಿದ್ದು, ವಿಚ್ಛೇದಿತರಾಗಿದ್ದರು. ಅವರು ತಮ್ಮ ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗನೊಂದಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com