ಕೆಸಿ ವೇಣುಗೋಪಾಲ್ ಗೆ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಶಮನ ಹೊಣೆ!

ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ.
ಕೆಸಿ ವೇಣುಗೋಪಾಲ್
ಕೆಸಿ ವೇಣುಗೋಪಾಲ್
Updated on

ನವದೆಹಲಿ: ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ.

ಭಾರತ್ ಜೋಡೋ ಯಾತ್ರೆ ಡಿಸೆಂಬರ್ ಮೊದಲ ವಾರದಲ್ಲಿ ರಾಜಸ್ಥಾನಕ್ಕೆ ಪ್ರವೇಶಿಸಲಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ನಡುವಿನ ಬಂಡಾಯವನ್ನು ಶಮನಗೊಳಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಅವರನ್ನು ನಿಯೋಜಿಸುವ ಮೂಲಕ ಕಾಂಗ್ರೆಸ್ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

ಎಐಸಿಸಿ ಮೂಲಗಳ ಪ್ರಕಾರ, ವೇಣುಗೋಪಾಲ್ ಅವರು ನವೆಂಬರ್ 29 ರಂದು ರಾಜಸ್ಥಾನಕ್ಕೆ ಪ್ರಯಾಣಿಸಲಿದ್ದು, ರಾಜಸ್ಥಾನದ ಭಾರತ್ ಜೋಡೋ ಯಾತ್ರೆಗಾಗಿ ರಚಿಸಲಾದ ಸಮಿತಿಗಳ ಸದಸ್ಯರೊಂದಿಗೆ ಸಭೆಗಳನ್ನು ನಡೆಸಲಿದ್ದಾರೆ. ಇದರಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಸಹ ಭಾಗವಹಿಸಲಿದ್ದಾರೆ ಎನ್ನಲಾಗಿದೆ. ಈ ವೇಳೆ ವೇಣುಗೋಪಾಲ್ ಅವರು ಯಾತ್ರೆಯ ಸಿದ್ಧತೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ರಾಜ್ಯ ಪ್ರವೇಶಿಸುವ ಮುನ್ನವೇ ನಾಯಕತ್ವ ವಿಚಾರದಲ್ಲಿ ಮಧ್ಯಪ್ರವೇಶಿಸದಿದ್ದರೆ ತಡವಾಗುತ್ತದೆ ಎಂದು ಪಕ್ಷದ ನಾಯಕತ್ವ ಅರಿತುಕೊಂಡಿದೆ ಎಂದು ಮೂಲಗಳು ತಿಳಿಸಿವೆ. ಉಭಯ ನಾಯಕರ ನಡುವಿನ ದೀರ್ಘಕಾಲದ ಜಗಳಕ್ಕೆ ಶತಾಯಗತಾಯ ತೆರೆ ಎಳೆಯುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕತ್ವ ಮುಂದಾಗಿದೆ. ಈ ಕಾರ್ಯಕ್ಕೆ ರಾಹುಲ್ ಗಾಂಧಿ ಅವರ ಅತ್ಯಂತ ವಿಶ್ವಾಸಾರ್ಹ ಸಹಾಯಕ ವೇಣುಗೋಪಾಲ್ ಇಬ್ಬರು ನಾಯಕರ ನಡುವೆ ತಾತ್ಕಾಲಿಕ ಒಪ್ಪಂದವನ್ನು ಕುದುರಿಸಲು ಸಾಧ್ಯವಾಗುತ್ತದೆ ಎಂದು ಪಕ್ಷವು ಆಶಿಸುತ್ತಿದೆ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಗೆಹ್ಲೋಟ್ ನಿರಾಕರಿಸಿದ ನಂತರ ಪಕ್ಷದಲ್ಲಿ ಅಶಾಂತಿ ಭುಗಿಲೆದ್ದಿದೆ. ರಾಜಸ್ಥಾನದಲ್ಲಿ ನಾಯಕತ್ವದ ಪ್ರಶ್ನೆಯ ಪರಿಹಾರವು 2-3 ದಿನಗಳಲ್ಲಿ ಹೊರಬರಲಿದೆ ಎಂದು ಸೆಪ್ಟೆಂಬರ್‌ನಲ್ಲಿ ವೇಣುಗೋಪಾಲ್ ಹೇಳಿದ್ದರು. ಇತ್ತೀಚಿನ ಟಿವಿ ಸಂದರ್ಶನವೊಂದರಲ್ಲಿ ಗೆಹ್ಲೋಟ್ ಅವರು ಪೈಲಟ್‌ರನ್ನು ದೇಶದ್ರೋಹಿ ಎಂದು ಪದೇ ಪದೇ ಕರೆದಿದ್ದರು ಮತ್ತು ಸರ್ಕಾರವನ್ನು ಉರುಳಿಸಲು ಬಿಜೆಪಿಯೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪೈಲಟ್ ಸಿಎಂ ಗೆಹ್ಲೋಟ್ ಗೆ ಅಸುರಕ್ಷಿತ ಎಂದು ಕರೆದಿದ್ದು, ಪಕ್ಷದಲ್ಲಿ ಒಗ್ಗಟ್ಟು ಮೂಡಿಸಲು ಒಟ್ಟಾಗಿ ಕೆಲಸ ಮಾಡುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಗೆಹ್ಲೋಟ್, ಪೈಲಟ್ ಅನ್ನು ಸಿಎಂ ಮಾಡಲು ಸಾಧ್ಯವಿಲ್ಲ, ಯಾರೂ ಅವರನ್ನು ಒಪ್ಪಿಕೊಳ್ಳುವುದಿಲ್ಲ. ನಾನು ಅವರನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಗೆಹ್ಲೋಟ್ ಅವರ ಆಕ್ರೋಶದ ನಂತರ, ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಇಬ್ಬರ ನಡುವಿನ ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಕರೆ ನೀಡಿದರು. “ಅಶೋಕ್ ಗೆಹ್ಲೋಟ್ ಹಿರಿಯ ಮತ್ತು ಅನುಭವಿ ರಾಜಕೀಯ ನಾಯಕ. ಅವರು ತಮ್ಮ ಕಿರಿಯ ಸಹೋದ್ಯೋಗಿ ಸಚಿನ್ ಪೈಲಟ್ ಅವರೊಂದಿಗೆ ವ್ಯಕ್ತಪಡಿಸಿದ ಯಾವುದೇ ಭಿನ್ನಾಭಿಪ್ರಾಯಗಳನ್ನು ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ರೀತಿಯಲ್ಲಿ ಪರಿಹರಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಕ್ಷವು ರಾಜಸ್ಥಾನವನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ, ಅದು ಮುನ್ನಡೆಯುತ್ತಿದೆ ಮುಂದಿನ ವರ್ಷ ವಿಧಾನಸಭೆ ಚುನಾವಣೆಗೆ ಸಮರ್ಥವಾಗಿ ಸಿದ್ದವಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com