ಉಕ್ರೇನ್ ಸಂಘರ್ಷದ ಬಗ್ಗೆ ಮೋದಿ, ಝೆಲೆನ್‌ಸ್ಕಿ ಚರ್ಚೆ; ಯುದ್ಧದಿಂದ ಪರಿಹಾರ ಸಾಧ್ಯವಿಲ್ಲ ಎಂದ ಪ್ರಧಾನಿ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಂಗಳವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್ ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಿಲ್ಲ ಮತ್ತು ಪರಮಾಣು ಸೌಲಭ್ಯಗಳ ಅಪಾಯವು ದುರಂತದ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಒತ್ತಿ ಹೇಳಿದರು.
ನರೇಂದ್ರ ಮೋದಿ - ವೊಲೊಡಿಮಿರ್ ಝೆಲೆನ್ಸ್ಕಿ
ನರೇಂದ್ರ ಮೋದಿ - ವೊಲೊಡಿಮಿರ್ ಝೆಲೆನ್ಸ್ಕಿ
Updated on

ನವದೆಹಲಿ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ಮಂಗಳವಾರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಉಕ್ರೇನ್ ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರವಿಲ್ಲ ಮತ್ತು ಪರಮಾಣು ಸೌಲಭ್ಯಗಳ ಅಪಾಯವು ದುರಂತದ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಒತ್ತಿ ಹೇಳಿದರು.

ತಮ್ಮ ದೂರವಾಣಿ ಸಂಭಾಷಣೆಯ ಸಮಯದಲ್ಲಿ, ಮೋದಿ ಮತ್ತು ಝೆಲೆನ್‌ಸ್ಕಿ ಅವರು ಉಕ್ರೇನ್‌ನಲ್ಲಿ ನಡೆಯುತ್ತಿರುವ ಸಂಘರ್ಷದ ಬಗ್ಗೆ ಚರ್ಚಿಸಿದರು. ಯುದ್ಧವನ್ನು ಶೀಘ್ರವಾಗಿ ನಿಲ್ಲಿಸಲು ಮಾತುಕತೆ ಹಾಗೂ ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು ಎಂದು ಪ್ರಧಾನಿ ಕಾರ್ಯಾಲಯವು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಸಂಘರ್ಷಕ್ಕೆ ಯಾವುದೇ ಮಿಲಿಟರಿ ಪರಿಹಾರ ಸಾಧ್ಯವಿಲ್ಲ ಮತ್ತು ಯಾವುದೇ ಶಾಂತಿ ಪ್ರಯತ್ನಗಳಿಗೆ ಕೊಡುಗೆ ನೀಡಲು ಭಾರತ ಸಿದ್ಧವಾಗಿದೆ. ವಿಶ್ವಸಂಸ್ಥೆಯ ಚಾರ್ಟರ್, ಅಂತರರಾಷ್ಟ್ರೀಯ ಕಾನೂನು ಮತ್ತು ಎಲ್ಲಾ ರಾಜ್ಯಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಅವರು ಪುನರುಚ್ಚರಿಸಿದರು.

ಉಕ್ರೇನ್ ಅಧ್ಯಕ್ಷರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ, ಉಕ್ರೇನ್ ಸೇರಿದಂತೆ ಪರಮಾಣು ಸ್ಥಾಪನೆಗಳ ಸುರಕ್ಷತೆ ಮತ್ತು ಭದ್ರತೆಗೆ ಭಾರತವು ನೀಡುವ ಮಹತ್ವವನ್ನು ಒತ್ತಿ ಹೇಳಿದ ಅವರು, ಪರಮಾಣು ಸೌಲಭ್ಯಗಳ ಅಪಾಯವು ಸಾರ್ವಜನಿಕ ಆರೋಗ್ಯ ಮತ್ತು ಪರಿಸರಕ್ಕೆ ದೂರಗಾಮಿ ಮತ್ತು ದುರಂತದ ಪರಿಣಾಮಗಳನ್ನು ಉಂಟುಮಾಡಬಹುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com