ಮಹಾರಾಷ್ಟ್ರದ ನಾಸಿಕ್ ಬಳಿ ಬಸ್ ಹೊತ್ತಿ ಉರಿದು ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ: ಮುಖ್ಯಮಂತ್ರಿ, ಪ್ರಧಾನಿ ಪರಿಹಾರ ಘೋಷಣೆ

ಮಹಾರಾಷ್ಟ್ರ ರಾಜ್ಯದ ನಾಸಿಕ್ ನ ಔರಂಗಾಬಾದ್ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಹೊತ್ತು ಉರಿದು ಸಜೀವ ದಹನಗೊಂಡು ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ.
ಹೊತ್ತಿ ಉರಿದ ಬಸ್ಸು
ಹೊತ್ತಿ ಉರಿದ ಬಸ್ಸು
Updated on

ನಾಸಿಕ್: ಮಹಾರಾಷ್ಟ್ರ ರಾಜ್ಯದ ನಾಸಿಕ್ ನ ಔರಂಗಾಬಾದ್ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಹೊತ್ತು ಉರಿದು ಸಜೀವ ದಹನಗೊಂಡು ಮೃತಪಟ್ಟವರ ಸಂಖ್ಯೆ 12ಕ್ಕೇರಿದೆ. ಇಂದು ನಸುಕಿನ ಜಾವ 5 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು 38 ಮಂದಿ ಗಾಯಗೊಂಡಿದ್ದಾರೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ಬಸ್ಸಿನಲ್ಲಿದ್ದ ಪ್ರಯಾಣಿಕರಾಗಿದ್ದಾರೆ. 

ಖಾಸಗಿ ಬಸ್ಸು ಕಂಟೈನರ್ ಗೆ ಡಿಕ್ಕಿ ಹೊಡೆದ ಕೂಡಲೇ ಬೆಂಕಿ ಹಚ್ಚಿ ಉರಿದು ಕೆನ್ನಾಲಿಗೆಯನ್ನು ಚಾಚಿತು. ಸಾವು-ನೋವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಸ್ಲೀಪರ್ ಕೋಚ್ ಖಾಸಗಿ ಬಸ್ಸಿನಲ್ಲಿ ಸುಮಾರು 30 ಪ್ರಯಾಣಿಕರಿದ್ದರು. 

ಪ್ರಧಾನ ಮಂತ್ರಿ ಪರಿಹಾರ: ಮೃತಪಟ್ಟವರ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ರಾಜ್ಯ ಸರ್ಕಾರ 5 ಲಕ್ಷ ರೂ.ಪರಿಹಾರ: ನಾಸಿಕ್‌ನಲ್ಲಿ ಇಂದು ನಸುಕಿನ ಜಾವ ನಡೆದ ಘಟನೆ ದುರದೃಷ್ಟಕರವಾಗಿದ್ದು, 11 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದು ನಮ್ಮ ಆದ್ಯತೆ. ಆಸ್ಪತ್ರೆಯಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಮೃತರ ಸಂಬಂಧಿಕರಿಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಘೋಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com