ಜ್ಞಾನವಾಪಿ ಮಸೀದಿ ಪ್ರಕರಣ: ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತಾದ ವಿಚಾರಣೆ ಅ.14ಕ್ಕೆ ಮುಂದೂಡಿಕೆ!

ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಮನವಿಯ ಕುರಿತು ಅಕ್ಟೋಬರ್ 14ರಂದು ತನ್ನ ಆದೇಶ ನೀಡುವುದಾಗಿ ವಾರಣಾಸಿ ನ್ಯಾಯಾಲಯ ಮಂಗಳವಾರ ಹೇಳಿದೆ.
ಜ್ಞಾನವಾಪಿ ಮಸೀದಿ
ಜ್ಞಾನವಾಪಿ ಮಸೀದಿ
Updated on

ವಾರಣಾಸಿ: ಜ್ಞಾನವಾಪಿ ಮಸೀದಿ ಆವರಣದಲ್ಲಿ ಪತ್ತೆಯಾದ 'ಶಿವಲಿಂಗ'ದ ಕಾರ್ಬನ್ ಡೇಟಿಂಗ್ ಕೋರಿ ಸಲ್ಲಿಸಲಾದ ಮನವಿಯ ಕುರಿತು ಅಕ್ಟೋಬರ್ 14ರಂದು ತನ್ನ ಆದೇಶ ನೀಡುವುದಾಗಿ ವಾರಣಾಸಿ ನ್ಯಾಯಾಲಯ ಮಂಗಳವಾರ ಹೇಳಿದೆ.

'ಶಿವಲಿಂಗ' ಎಂದು ಹೇಳಲಾಗುತ್ತಿರುವ ಕಾರಂಜಿಯ ಕಾರ್ಬನ್-ಡೇಟಿಂಗ್‌ಗೆ ಅರ್ಜಿದಾರರ ಮನವಿಗೆ ಉತ್ತರವನ್ನು ಸಲ್ಲಿಸುವಂತೆ ನ್ಯಾಯಾಲಯವು ಕಳೆದ ವಾರ ಮಸೀದಿ ಆಡಳಿತವನ್ನು ಕೇಳಿತ್ತು. 

ವೀಡಿಯೋಗ್ರಫಿ ಸಮೀಕ್ಷೆ ವೇಳೆ ಮಸೀದಿ ಆವರಣದೊಳಗೆ ಈ ರಚನೆ ಪತ್ತೆಯಾಗಿತ್ತು. ಇದನ್ನು ಹಿಂದೂ ಅರ್ಜಿದಾರರು ಶಿವಲಿಂಗ ಎಂದು ಪ್ರತಿಪಾದಿಸಿದ್ದಾರೆ.

ಜ್ಞಾನವಾಪಿ ಮಸೀದಿಯು ಕಾಶಿ ವಿಶ್ವನಾಥ ದೇವಾಲಯದ ಪಕ್ಕದಲ್ಲಿದೆ. ವಾರಣಾಸಿ ನ್ಯಾಯಾಲಯದಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಕೆಡವಲ್ಪಟ್ಟ ಹಿಂದೂ ರಚನೆಯ ಒಂದು ಭಾಗದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂಬ ಆರೋಪವನ್ನು ಪುನರುಜ್ಜೀವನಗೊಳಿಸಿದೆ.

'ಶಿವಲಿಂಗ' ಎಂದು ಕರೆಯಲ್ಪಡುವ ವಸ್ತುವು ವಾಸ್ತವವಾಗಿ "ಕಾರಂಜಿ" ಎಂದು ಮಸೀದಿ ಸಮಿತಿ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com