ಚೆನ್ನೈ: ಯುವಕನೊಬ್ಬ ಸೇಂಟ್ ಥಾಮಸ್ ಮೌಂಟ್ ರೈಲ್ವೇ ನಿಲ್ದಾಣದಲ್ಲಿ 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಚಲಿಸುತ್ತಿದ್ದ ರೈಲಿನ ಮುಂದೆ ತಳ್ಳಿ ಕೊಂದ ದಾರುಣ ಘಟನೆ ಗುರುವಾರ ನಡೆದಿದೆ.
ಕಾಲೇಜು ವಿದ್ಯಾರ್ಥಿನಿ ಚೆನ್ನೈ ಬೀಚ್ಗೆ ಹೋಗುವ ರೈಲು ಹತ್ತಲು ಕಾಯುತ್ತಿದ್ದಾಗ 23 ವರ್ಷದ ಆರೋಪಿ ಆಕೆಯನ್ನು ರೈಲು ಬರುತ್ತಿದ್ದ ವೇಳೆ ತಳ್ಳಿದ್ದಾನೆ. ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ಆರೋಪಿಯನ್ನು ಆಲಂದೂರಿನ ಡಿ ಸತೀಶ್ ಎಂದು ಗುರುತಿಸಲಾಗಿದ್ದು, ಆರೋಪಿ ತಂದೆ ದಯಾಳನ್ ನಿವೃತ್ತ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿದ್ದಾರೆ.
ಮೃತ ಕಾಲೇಜು ವಿದ್ಯಾರ್ಥಿನಿ ಆಲಂದೂರಿನ ಎಂ ಸತ್ಯ ಎಂದು ಗುರುತಿಸಲಾಗಿದ್ದು, ಈ ಯುವತಿಯನ್ನು ಸತೀಶ್ ಒನ್ಸೈಡ್ ಲವ್ ಮಾಡುತ್ತಿದ್ದ ಎನ್ನಲಾಗಿದೆ.
ಕಳೆದ ತಿಂಗಳು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿ ಸತ್ಯ ಸಹ ಪೊಲೀಸ್ ಸಿಬ್ಬಂದಿ ಕುಟುಂಬದಿಂದ ಬಂದವರು.
ಆಕೆಯ ತಾಯಿ ಎಂ ರಾಜಲಕ್ಷ್ಮಿ ಆಡಂಬಕ್ಕಂ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೆಬಲ್ ಆಗಿದ್ದಾರೆ. ಸತ್ಯಾ ಅವರ ತಾಯಿಯ ಸಹೋದರಿ, ಅವರ ತಾಯಿಯ ಚಿಕ್ಕಪ್ಪ ಮತ್ತು ಅವರ ಚಿಕ್ಕಮ್ಮ ಎಲ್ಲರೂ ನಗರ ಪೊಲೀಸ್ನ ವಿವಿಧ ವಿಭಾಗಗಳಲ್ಲಿದ್ದಾರೆ.
Advertisement