ಹಿಂಗಾರು ಬೆಳೆಗಳಿಗೆ ಎಂಎಸ್ ಪಿ ಹೆಚ್ಚಿಸಿ ಕೇಂದ್ರ ಸಚಿವ ಸಂಪುಟ ಅನುಮೋದನೆ

2023-24ನೇ ಸಾಲಿನ ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆಯನ್ನು  ಹೆಚ್ಚಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಸಾಂದರ್ಭಿಕ ಚಿತ್ರ
ಪ್ರಧಾನಿ ನರೇಂದ್ರ ಮೋದಿ ಸಾಂದರ್ಭಿಕ ಚಿತ್ರ
Updated on

ನವದೆಹಲಿ: 2023-24ನೇ ಸಾಲಿನ ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆಯನ್ನು  ಹೆಚ್ಚಿಸಲಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಂಗಳವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

ನೂತನ ಅನುಮೋದಿತ ಪಟ್ಟಿಯ ಪ್ರಕಾರ ಗೋಧಿಗೆ ರೂ. 110, ಬಾರ್ಲಿಗೆ 100 ರೂ. ಕಡಲೆ ಬೇಳೆಗೆ 105, ಮಸೂರ್ ದಾಲ್ ಗೆ 500, ಸಾಸಿವೆ ಕಾಳಿಗೆ 400, ಕೇಸರಿಗೆ 209 ರೂ. ಬೆಂಬಲ ಬೆಲೆ ಹೆಚ್ಚಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಸೂರ್ ದಾಲ್ ಗೆ ಅತಿ ಹೆಚ್ಚು 500 ರೂ. ಬೆಂಬಲ ಬೆಲೆ ಹೆಚ್ಚಿಸಿರುವುದಾಗಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com