ಶ್ರೀನಗರ: ಗ್ರೆನೇಡ್ ಎಸೆದು ಇಬ್ಬರು ಕಾರ್ಮಿಕರ ಹತ್ಯೆಗೈದಿದ್ದ ಹೈಬ್ರಿಡ್ ಉಗ್ರನನ್ನು ಭಾರತೀಯ ಸೇನಾಪಡೆ ಬುಧವಾರ ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.
ನಿಷೇಧಿತ ಉಗ್ರ ಸಂಘಟನೆಯಾದ ಲಷ್ಕರ್ ಇ ತೊಯ್ಬಾ (ಎಲ್ಇಟಿ)ಗೆ ಸೇರಿದ ಹೈಬ್ರಿಡ್ ಉಗ್ರನನ್ನು ಭಾರತೀಯ ಸೇನಾಪಡೆ ಇಂದು ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಶೋಪಿಯಾನ್ ಜಿಲ್ಲೆಯ ಹೆರ್ಮೈನ್ ಪ್ರದೇಶದಲ್ಲಿ ಉತ್ತರಪ್ರದೇಶದ ಇಬ್ಬರು ಕಾರ್ಮಿಕರ ಮೇಲೆ ಗ್ರೆನೇಡ್ ಎಸೆದು ಹತ್ಯೆ ಮಾಡಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಇಮ್ರಾನ್ ಬಶೀರ್ ಗನೈ ಎನ್ಕೌಂಟರ್ ನಲ್ಲಿ ಹತನಾಗಿದ್ದಾನೆ.
ಬಂಧಿತ ಹೈಬ್ರಿಡ್ ಭಯೋತ್ಪಾದಕ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸ್ ಮತ್ತು ಭದ್ರತಾ ಪಡೆಗಳು ನಿರಂತರ ಕಾರ್ಯಾಚರಣೆ ಮುಂದುವರೆಸಿದವು. ಈ ವೇಳೆ ಇಮ್ರಾನ್ ಬಶೀರ್ ಗನೈ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement