ಪುಣೆ ಸೆಪ್ಟಿಕ್ ಟ್ಯಾಂಕ್ ದುರಂತ: ಇಬ್ಬರು ಕಾರ್ಮಿಕರ ಮೃತದೇಹ ಪತ್ತೆ, ಮತ್ತೊಬ್ಬರಿಗಾಗಿ ಮುಂದುವರೆದ ಶೋಧ!

ಪುಣೆಯ ವಾಘೋಲಿಯಲ್ಲಿ ಮುಂಜಾನೆ ಭಾರಿ ದುರಂತ ಸಂಭವಿಸಿದೆ. ಇಲ್ಲಿ ಖಾಸಗಿ ಸೊಸೈಟಿಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಬಂದಿದ್ದ ಮೂವರು ನೈರ್ಮಲ್ಯ ಕಾರ್ಮಿಕರು ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಪುಣೆ: ಪುಣೆಯ ವಾಘೋಲಿಯಲ್ಲಿ ಮುಂಜಾನೆ ಭಾರಿ ದುರಂತ ಸಂಭವಿಸಿದೆ. ಇಲ್ಲಿ ಖಾಸಗಿ ಸೊಸೈಟಿಯ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಬಂದಿದ್ದ ಮೂವರು ನೈರ್ಮಲ್ಯ ಕಾರ್ಮಿಕರು ಮೃತಪಟ್ಟಿದ್ದಾರೆ.

ದುರಂತದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪುಣೆ ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸ್ಥಳಕ್ಕೆ ಧಾವಿಸಿದೆ. ನಾಪತ್ತೆಯಾಗಿರುವ ನೌಕರನ ಪತ್ತೆಗೆ ತಂಡವನ್ನು ನಿಯೋಜಿಸಿತ್ತು. ಮೂಲಗಳ ಪ್ರಕಾರ ಮೂವರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ. ಸದ್ಯ ಇಬ್ಬರ ದೇಹ ಪತ್ತೆಯಾಗಿದ್ದು ಮತ್ತೊಬ್ಬರ ಮೃತದೇಹಕ್ಕಾಗಿ ಶೋಧ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೆಪ್ಟಿಕ್ ಟ್ಯಾಂಕ್ 18 ಅಡಿ ಆಳವಿತ್ತು
18 ಅಡಿ ಆಳದ ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸಲು ಮೂವರು ನೈರ್ಮಲ್ಯ ಕಾರ್ಮಿಕರು ಇಳಿದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟ್ಯಾಂಕಿನೊಳಗೆ ಉಸಿರಾಡಲಾಗದೆ ಮೂವರು ನೌಕರರು ಸಾವನ್ನಪ್ಪಿದ್ದರು. ಬೆಳಿಗ್ಗೆ 7 ಗಂಟೆಗೆ ನಮಗೆ ಈ ಬಗ್ಗೆ ಮಾಹಿತಿ ಸಿಕ್ಕಿತು, ನಂತರ ಇಬ್ಬರು ಉದ್ಯೋಗಿಗಳ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅವರು ಹೇಳಿದರು. ಅದೇ ಸಮಯದಲ್ಲಿ, ಒಬ್ಬ ಉದ್ಯೋಗಿ ಕಾಣೆಯಾಗಿದ್ದಾರೆ ಎಂದು ಹೇಳಲಾಗುತ್ತದೆ, ಅವರ ಹುಡುಕಾಟ ನಡೆಯುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com