ಕೇರಳ: ತಾರಕಕ್ಕೇರಿದ ರಾಜ್ಯಪಾಲ-ಸರ್ಕಾರದ ನಡುವಿನ ತಿಕ್ಕಾಟ, 9 ವಿವಿಗಳ ಉಪಕುಲಪತಿಗಳ ರಾಜೀನಾಮೆ ಕೇಳಿದ ಆರೀಫ್ ಖಾನ್ 

ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್
Updated on

ತಿರುವನಂತಪುರಂ: ಕೇರಳ ರಾಜ್ಯದ 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ರಾಜ್ಯಪಾಲರು ಸೂಚಿಸಿದ್ದು ಸರ್ಕಾರ ಹಾಗೂ ರಾಜ್ಯಪಾಲರ ನಡುವಿನ ತಿಕ್ಕಾಟ ತಾರಕಕ್ಕೇರಿದೆ. 

ಇತ್ತೀಚೆಗೆ ಸುಪ್ರೀಂ ಕೋರ್ಟ್, ಎಪಿಜೆ ಅಬ್ದುಲ್ ಕಲಾಪ್ ತಾಂತ್ರಿಕ ವಿವಿಯ ಉಪಕುಲಪತಿ ನೇಮಕವನ್ನು ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದೆ ಎಂದು ರದ್ದುಗೊಳಿಸಿತ್ತು. ಈ ಬೆನ್ನಲ್ಲೇ ರಾಜ್ಯಪಾಲರು 9 ವಿವಿಗಳ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ. ಈ ಪೈಕಿ ಎಪಿಜೆ ಅಬ್ದುಲ್ ಕಲಾಮ್ ತಾಂತ್ರಿಕ ವಿವಿಯ ಉಪಕುಲಪತಿಗಳೂ ಇದ್ದಾರೆ ಎಂದು ತಿಳಿದುಬಂದಿದೆ.

ವಿವಿಗಳ ಕುಲಪತಿಗಳೂ ಆಗಿರುವ ರಾಜ್ಯಪಾಲರು ಸೋಮವಾರ ಬೆಳಿಗ್ಗೆ 11.30 ರ ವೇಳೆಗೆ ಉಪಕುಲಪತಿಗಳ ರಾಜೀನಾಮೆ ತಮಗೆ ತಲುಪಬೇಕು ಎಂದೂ ನಿರ್ದೇಶನ ನೀಡಿರುವುದಾಗಿ ರಾಜಭವನ ತಿಳಿಸಿದೆ.

ರಾಜ್ಯಪಾಲರ ಆದೇಶವನ್ನು ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ ರಾಜ್ಯಪಾಲರ ನಡೆ ಸಂಘಪರಿವಾರದ ಪಿತೂರಿಯಾಗಿದ್ದು, ದೇಶದಲ್ಲಿನ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸುವ ಅಜೆಂಡಾ ಆಗಿದೆ ಎಂದು ಟೀಕಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com