ಉತ್ತರ ಪ್ರದೇಶ: ಶೌಚಾಲಯದ ಆಸನ ಕದ್ದ ಶಂಕೆ, ದಲಿತ ವ್ಯಕ್ತಿಗೆ ಥಳಿತ; ಬಿಜೆಪಿ ನಾಯಕ ಸೇರಿ ಮೂವರ ಬಂಧನ 

ಶೌಚಾಲಯದ ಆಸನವನ್ನು ಕದ್ದ ಶಂಕೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.
ದಲಿತನ ಮೇಲೆ ಹಲ್ಲೆ (ಸಂಗ್ರಹ ಚಿತ್ರ)
ದಲಿತನ ಮೇಲೆ ಹಲ್ಲೆ (ಸಂಗ್ರಹ ಚಿತ್ರ)
Updated on

ಬಹ್ರೈಚ್: ಶೌಚಾಲಯದ ಆಸನವನ್ನು ಕದ್ದ ಶಂಕೆಯಲ್ಲಿ 30 ವರ್ಷದ ದಲಿತ ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಮನಸೋ ಇಚ್ಛೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯಲ್ಲಿ ನಡೆದಿದೆ.
 
ಬಿಜೆಪಿ ನಾಯಕನೂ ಸೇರಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದ್ದು, ದಿನಗೂಲಿ ಕಾರ್ಮಿಕ ರಾಜೇಶ್ ಕುಮಾರ್ ಸಂತ್ರಸ್ತ ವ್ಯಕ್ತಿ ಎಂದು ತಿಳಿದುಬಂದಿದೆ.
 
ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ತನಿಖೆ ಪ್ರಾರಂಭಗೊಂಡಿದೆ. ಬಿಜೆಪಿ ನಾಯಕ ರಾಧೇಶ್ಯಾಮ್ ಮಿಶ್ರಾ, ಸರೋಜ್ ಅಲಿಯಾಸ್ ರೇಣು ವಾಜಪೇಯಿ, ರಾಕೇಶ್ ತಿವಾರಿ ವಿರುದ್ಧ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com