ಗುಜರಾತ್: ಯಾತ್ರಾರ್ಥಿಗಳ ಮೇಲೆ ಹರಿದ ಕಾರು, ಆರು ಮಂದಿ ಸಾವು

ಗುಜರಾತ್‌ನ ಅರಾವಳಿ ಜಿಲ್ಲೆಯ ಅಂಬಾಜಿ ದೇವಸ್ಥಾನ ನಗರಿಗೆ ತೆರಳುತ್ತಿದ್ದ ಆರು ಯಾತ್ರಾರ್ಥಿಗಳ ಮೇಲೆ ಇನ್ನೊವಾ ಕಾರು ಹರಿದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸೂರತ್: ಗುಜರಾತ್‌ನ ಅರಾವಳಿ ಜಿಲ್ಲೆಯ ಅಂಬಾಜಿ ದೇವಸ್ಥಾನ ನಗರಿಗೆ ತೆರಳುತ್ತಿದ್ದ ಆರು ಯಾತ್ರಾರ್ಥಿಗಳ ಮೇಲೆ ಇನ್ನೊವಾ ಕಾರು ಹರಿದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಇಂದು ಬೆಳಗ್ಗೆ 6 ಗಂಟೆಯ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಈ ಯಾತ್ರಾರ್ಥಿಗಳು ಗುಂಪು ಗುಜರಾತ್‌ನ ದಾಹೋದ್‌ನಿಂದ ಬಂದಿದ್ದು, ಭದರ್ವಿ ಪೂನಂ ಜಾತ್ರೆಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರಿಗೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com