ರಾಹುಲ್ ಗಾಂಧಿಗೆ ಏಕೀಕರಣ ಬೇಕಾದರೆ ಪಾಕಿಸ್ತಾನಕ್ಕೆ ಭಾರತ್ ಜೋಡೋ ಯಾತ್ರೆ ಮಾಡಬೇಕು: ಅಸ್ಸಾಂ ಸಿಎಂ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಏಕೀಕರಣ ಬೇಕಾದರೆ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಪಾಕಿಸ್ತಾನಕ್ಕೆ ಹೋಗಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ   ಬುಧವಾರ ಟ್ವೀಟ್ ಮಾಡಿದ್ದಾರೆ.
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ
ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ
Updated on

ನವದೆಹಲಿ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಏಕೀಕರಣ ಬೇಕಾದರೆ ಭಾರತ್ ಜೋಡೋ ಯಾತ್ರೆಗೆ (Bharat Jodo Yatra) ಪಾಕಿಸ್ತಾನಕ್ಕೆ ಹೋಗಬೇಕು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಬುಧವಾರ ಟ್ವೀಟ್ ಮಾಡಿದ್ದಾರೆ.

ಕನ್ಯಾಕುಮಾರಿಯಿಂದ ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಬುಧವಾರ ಸಂಜೆ 4 ಗಂಟೆಗೆ ಚಾಲನೆ ನೀಡಲಿದೆ. 12 ರಾಜ್ಯಗಳ ಮೂಲಕ ಪ್ರಯಾಣವು 150 ದಿನಗಳಲ್ಲಿ 3,750 ಕಿಮೀ ಕ್ರಮಿಸುವ ನಿರೀಕ್ಷೆಯಿದೆ.

ಭಾರತ್ ಜೋಡೋ ಯಾತ್ರೆ ಶತಮಾನದ ಹಾಸ್ಯ. ಇಂದು ನಾವು ವಾಸಿಸುತ್ತಿರುವ ಭಾರತವು ಸ್ಥಿತಿಸ್ಥಾಪಕತ್ವವುಳ್ಳ, ಬಲವಾದ ಏಕೀಕೃತವಾಗಿದೆ. 1947ರಲ್ಲಿ ಮಾತ್ರ ಭಾರತ ಇಬ್ಭಾಗವಾಯಿತು ಏಕೆಂದರೆ ಕಾಂಗ್ರೆಸ್ ಅದಕ್ಕೆ ಒಪ್ಪಿಗೆ ನೀಡಿತು. ರಾಹುಲ್ ಗಾಂಧಿ ಅವರು ಏಕೀಕರಣ ಬೇಕಾದರೆ ಭಾರತ್ ಜೋಡೋ ಯಾತ್ರೆಗೆ ಪಾಕಿಸ್ತಾನಕ್ಕೆ ಹೋಗಬೇಕು ಎಂದು ಶರ್ಮಾ ಬುಧವಾರ ಟ್ವೀಟ್ ಮಾಡಿದ್ದಾರೆ.

ಶರ್ಮಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, “ನಾನು ಅಸ್ಸಾಂ ಸಿಎಂ ಅವರನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ, ಏಕೆಂದರೆ 20-25 ವರ್ಷಗಳಿಂದ ಕಾಂಗ್ರೆಸ್‌ನ ಭಾಗವಾಗಿರುವ ಅವರು ಪ್ರತಿದಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಬೇಕು. ಅವರು ಇತ್ತೀಚೆಗೆ ಬಿಜೆಪಿಗೆ ವಲಸೆ ಹೋದವರು, ಆದ್ದರಿಂದ ಅವರು ಪ್ರತಿದಿನ ಅತಿರೇಕದ ಹೇಳಿಕೆಗಳನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com