4 ಸಾಧುಗಳಿಗೆ ಥಳಿತ ಪ್ರಕರಣ: 6 ಮಂದಿಯನ್ನು ಬಂಧಿಸಿದ ಮಹಾರಾಷ್ಟ್ರ ಪೊಲೀಸ್ 

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಾಲ್ವರು ಸಾಧುಗಳನ್ನು ಥಳಿಸಿದ್ದ ಪ್ರಕರಣದಲ್ಲಿ ಪೊಲೀಸರು 6  ಮಂದಿಯನ್ನು ಬಂಧಿಸಿದ್ದಾರೆ. 
ಪೊಲೀಸ್ ಠಾಣೆ
ಪೊಲೀಸ್ ಠಾಣೆ
Updated on

ಮುಂಬೈ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಾಲ್ವರು ಸಾಧುಗಳನ್ನು ಥಳಿಸಿದ್ದ ಪ್ರಕರಣದಲ್ಲಿ ಪೊಲೀಸರು 6  ಮಂದಿಯನ್ನು ಬಂಧಿಸಿದ್ದಾರೆ. 

ಮಕ್ಕಳ ಕಳ್ಳರೆಂದು ತಪ್ಪು ಭಾವಿಸಿ ಸಾಧುಗಳನ್ನು ಸಾರ್ವಜನಿಕರು ಥಳಿಸಿದ್ದರು. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು 20 ಮಂದಿ ವಿರುದ್ಧ ಪ್ರಕರಾಣ ದಾಖಲಿಸಿದ್ದಾರೆ.

ತಮ್ಮನ್ನು ಥಳಿಸಿದವರ ವಿರುದ್ಧ ಸಾಧುಗಳು ಯಾವುದೇ ದೂರನ್ನು ದಾಖಲಿಸಿಲ್ಲ ಹಾಗೂ ಪೊಲೀಸರ ಸಮ್ಮುಖದಲ್ಲಿ ಅವರು ಉತ್ತರ ಪ್ರದೇಶದ ಅಖಾಡ ಒಂದರ ಸದಸ್ಯರು ಎಂಬ ಸ್ಪಷ್ಟನೆ ದೊರೆತು ಗೊಂದಲ ಬಗೆಹರಿಯುತ್ತಿದ್ದಂತೆಯೇ ಅವರು ಆ ಸ್ಥಳದಿಂದ ನಿರ್ಗಮಿಸಿದ್ದಾರೆ. ಸಾಧುಗಳನ್ನು ಕೋಲಿನಿಂದ ಥಳಿಸುತ್ತಿದ್ದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com