2024 ಚುನಾವಣೆ: ದೇಶದ ಹಿತಕ್ಕಾಗಿ ಕಾಂಗ್ರೆಸ್ ನೊಂದಿಗಿನ ಕಹಿ ಮರೆಯಲು ಮಮತಾ ಸಿದ್ಧ- ಪವಾರ್

ದೇಶದ ಹಿತಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯಲು ಸಿದ್ಧರಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. 
ಶರದ್ ಪವಾರ್
ಶರದ್ ಪವಾರ್
Updated on

ಮುಂಬೈ: ದೇಶದ ಹಿತಕ್ಕಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಾಂಗ್ರೆಸ್ ನೊಂದಿಗಿನ ಭಿನ್ನಾಭಿಪ್ರಾಯವನ್ನು ಮರೆಯಲು ಸಿದ್ಧರಿದ್ದಾರೆ ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್ ಹೇಳಿದ್ದಾರೆ. 

2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ವಿಪಕ್ಷಗಳ ಒಕ್ಕೂಟ ರಚನೆಗೆ ಸಹಕರಿಸಲಿದ್ದಾರೆ ಎಂದು ಮುಂಬೈ ನಲ್ಲಿ ಮಾತನಾಡಿರುವ ಪವಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಬಿಹಾರ ಸಿಎಂ ನಿತೀಶ್ ಕುಮಾರ್, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಸಹ ಬಿಜೆಪಿಯನ್ನು ವಿರೋಧಿಸಲು ಕಾಂಗ್ರೆಸ್ ನೊಂದೊಗೆ ಕೈ ಜೋಡಿಸಲು ಹಿಂದೇಟು ಹಾಕುವುದಿಲ್ಲ ಎಂದು ಪವಾರ್ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯಲ್ಲೂ ಕಾಂಗ್ರೆಸ್, ಸಿಪಿಐ(ಎಂ) ನ ಮೈತ್ರಿ ಬಿಜೆಪಿಯನ್ನು ರಾಜ್ಯದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವುದರಿಂದ ದೂರ ಮಾಡಿತ್ತು ಎಂಬುದು ಟಿಎಂಸಿ ಅಭಿಪ್ರಾಯವಾಗಿತ್ತು ಎಂದು ಎನ್ ಸಿಪಿ ಮುಖ್ಯಸ್ಥರು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com