ಅಳುತ್ತಿರುವ ಮಹಿಳೆಯ ಚಿತ್ರ
ಅಳುತ್ತಿರುವ ಮಹಿಳೆಯ ಚಿತ್ರ

ಉತ್ತರ ಪ್ರದೇಶ: ಭಾರೀ ಮಳೆ, ಸಿಡಿಲಿಗೆ 36 ಮಂದಿ ಸಾವು

ಉತ್ತರ ಭಾರತದಲ್ಲಿ ಅಪಾಯಕಾರಿ ವಾತವಾರಣದಿಂದಾಗಿ  ಕಳೆದ 24 ಗಂಟೆಗಳಲ್ಲಿ  36 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 12 ಜನರು ಸಿಡಿಲಿಗೆ ಬಲಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
Published on

ಲಖನೌ: ಉತ್ತರ ಭಾರತದಲ್ಲಿ ಅಪಾಯಕಾರಿ ವಾತವಾರಣದಿಂದಾಗಿ  ಕಳೆದ 24 ಗಂಟೆಗಳಲ್ಲಿ  36 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 12 ಜನರು ಸಿಡಿಲಿಗೆ ಬಲಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಉತ್ತರ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಕುಸಿತದ ನಂತರ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ವಿಪತ್ತು ಆಯುಕ್ತ ರಣವೀರ್ ಪ್ರಸಾದ್ ಹೇಳಿದ್ದಾರೆ. ಕಳೆದ ಐದು  ದಿನಗಳಲ್ಲಿ ಸಿಡಿಲು ಬಡಿದು  39 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದು, ಗುಡುಗು ಸಹಿತ ಮಳೆ ಸಮಯದಲ್ಲಿ ಜನರು ತಮ್ಮನ್ನು ಹೇಗೆ ರಕ್ಷಿಸಿಕೊಳ್ಳಬಹುದು ಎಂಬುದಕ್ಕೆ ಹೊಸ ಮಾರ್ಗಸೂಚಿಗಳನ್ನು ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಜೂನ್ ನಿಂದ ಪ್ರಾರಂಭವಾಗುವ  ಮಾನ್ಸೂನ್ ಋತುವಿನಲ್ಲಿ ದೇಶದಲ್ಲಿ ಮಿಂಚು- ಗುಡುಗು ಸಾಮಾನ್ಯವಾಗಿದೆ. ಅರಣ್ಯನಾಶ, ಜಲಮೂಲಗಳ ಸವಕಳಿ ಮತ್ತು ಮಾಲಿನ್ಯವು ಹವಾಮಾನ ಬದಲಾವಣೆಗೆ ಕೊಡುಗೆ ನೀಡುತ್ತಿದ್ದು, ಇದು ಹೆಚ್ಚಿನ ಮಿಂಚು ಉಂಟಾಗಲು ಕಾರಣವಾಗುತ್ತಿದೆ ಎಂದು  ಭಾರತೀಯ ಹವಾಮಾನ ಇಲಾಖೆಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕರ್ನಲ್ ಸಂಜಯ್ ಶ್ರೀವಾಸ್ತವ ಹೇಳಿದರು. 

ಜಾಗತಿಕ ತಾಪಮಾನವು ಮಿಂಚಿನ ಆವರ್ತನವನ್ನು ಹೆಚ್ಚಿಸಿದೆ ಎಂದು ವಿಜ್ಞಾನ ಮತ್ತು ಪರಿಸರ ಕೇಂದ್ರದ ಮಹಾನಿರ್ದೇಶಕಿ ಸುನಿತಾ ನರೇನ್ ಹೇಳಿದ್ದಾರೆ.  2016 ರಲ್ಲಿ ಮಿಂಚಿನಿಂದಾಗಿ ದೇಶದಲ್ಲಿ 1,489 ಸಾವುಗಳು ದಾಖಲಾಗಿವೆ ಮತ್ತು 2021 ರಲ್ಲಿ ಈ ಸಂಖ್ಯೆ 2,869 ಕ್ಕೆ ಏರಿದೆ ಎಂದು ಶ್ರೀವಾಸ್ತವ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X
Google Preferred source

Advertisement

X
Kannada Prabha
www.kannadaprabha.com