ವ್ಯಾಪಂ ಹಗರಣ: ಐವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ

ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಐವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭೋಪಾಲ್: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಮಧ್ಯ ಪ್ರದೇಶದಲ್ಲಿ ನಡೆದ ಬಹುಕೋಟಿ ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಐವರಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ಭೋಪಾಲ್ ಸಿಬಿಐ ವಿಶೇಷ ಕೋರ್ಟ್ ಶುಕ್ರವಾರ ತೀರ್ಪು ನೀಡಿದೆ.

2013ರಲ್ಲಿ ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ ನಡೆಸಿದ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ ನ್ಯಾಯಾಧೀಶರಾದ ನಿತಿರಾಜ್ ಸಿಂಗ್ ಸಿಸೋಡಿಯಾ ಅವರು ಅಪರಾಧಿಗಳಾದ ಕಮಲ್ ಕಿಶೋರ್, ಅಮರ್ ಸಿಂಗ್, ನಾಗೇಂದ್ರ ಸಿಂಗ್, ಸುರೇಶ್ ಸಿಂಗ್ ಹಾಗೂ ರವಿಕುಮಾರ್ ರಜಪೂತ್ ಗೆ ಏಳು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ.

ನ್ಯಾಯಾಲಯ ಅಪರಾಧಿಗಳಿಗೆ ಜೈಲು ಶಿಕ್ಷೆಯ ಜೊತೆಗೆ ತಲಾ 10,000 ರೂ.ಗಳ ದಂಡವನ್ನು ವಿಧಿಸಿದೆ ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಮನುಜಿ ಉಪಾಧ್ಯಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಸಿಕ್ಯೂಷನ್ ಪ್ರಕಾರ, ಕಮಲ್, ಅಮರ್, ನಾಗೇಂದ್ರ ಮತ್ತು ಸುರೇಶ್ ಅವರು ಏಪ್ರಿಲ್ 7, 2013 ರಂದು ಮಧ್ಯ ಪ್ರದೇಶ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯನ್ನು ಬರೆಯಲು ಬೇರೆ ಜನರನ್ನು ನೇಮಿಸಿಕೊಂಡಿದ್ದರು.

ರವಿ ರಜಪೂತ್ ಅವರು ನಾಗೇಂದ್ರ ಪರವಾಗಿ ನೇಮಕಾತಿ ಪರೀಕ್ಷೆ ಬರೆದಿದ್ದಾರೆ ಎಂದು ಉಪಾಧ್ಯಾಯ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com