ಧರ್ಮ ಸಂಸದ್ನಲ್ಲಿ ದ್ವೇಷ ಭಾಷಣ ತಡೆಯಿರಿ: ಉತ್ತರಾಖಂಡ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಉತ್ತರಾಖಂಡದ ರೂರ್ಕಿಯಲ್ಲಿ ನಡೆದ ಧಾರ್ಮಿಕ ಸಮಾವೇಶವು ಮುಸ್ಲಿಮರನ್ನು ಗುರಿಯಾಗಿಸುವ ದ್ವೇಷ-ಉತ್ಸವವಾಗಿ ಬದಲಾಗಬಾರದು..ಧರ್ಮ ಸಂಸದ್ನಲ್ಲಿ ದ್ವೇಷ ಭಾಷಣವನ್ನು ತಡೆಯಿರಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರಾಖಂಡ ಸರ್ಕಾರಕ್ಕೆ ತಾಕೀತು ಮಾಡಿದೆ.
Published: 26th April 2022 03:34 PM | Last Updated: 26th April 2022 03:40 PM | A+A A-

ಸುಪ್ರೀಂ ಕೋರ್ಟ್
ನವದೆಹಲಿ: ಉತ್ತರಾಖಂಡದ ರೂರ್ಕಿಯಲ್ಲಿ ನಡೆದ ಧಾರ್ಮಿಕ ಸಮಾವೇಶವು ಮುಸ್ಲಿಮರನ್ನು ಗುರಿಯಾಗಿಸುವ ದ್ವೇಷ-ಉತ್ಸವವಾಗಿ ಬದಲಾಗಬಾರದು..ಧರ್ಮ ಸಂಸದ್ನಲ್ಲಿ ದ್ವೇಷ ಭಾಷಣವನ್ನು ತಡೆಯಿರಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಉತ್ತರಾಖಂಡ ಸರ್ಕಾರಕ್ಕೆ ತಾಕೀತು ಮಾಡಿದೆ.
ಇದನ್ನೂ ಓದಿ: ಕೋಮುಗಲಭೆ, ದ್ವೇಷ ಭಾಷಣಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮೌನವೇಕೆ? ಕಾಂಗ್ರೆಸ್
ಇದೇ ಏಪ್ರಿಲ್ ತಿಂಗಳ ಆರಂಭದಲ್ಲಿ ಹಿಮಾಚಲ ಪ್ರದೇಶದಲ್ಲಿ ನಡೆದ ಧರ್ಮ ಸಂಸದ್ನಲ್ಲಿ ದ್ವೇಷ ಭಾಷಣ ಪ್ರಕರಣವನ್ನು ಹಿನ್ನಲೆಯಾಗಿಟ್ಟುಕೊಂಡು ಉತ್ತರಾಖಂಡ ಸರ್ಕಾರಕ್ಕೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್, 'ದ್ವೇಷದ ಭಾಷಣವನ್ನು ನಿಲ್ಲಿಸದಿದ್ದರೆ, (ಉತ್ತರಾಖಂಡ) ಮುಖ್ಯ ಕಾರ್ಯದರ್ಶಿಯನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ನಾವು ಮುಖ್ಯ ಕಾರ್ಯದರ್ಶಿಯನ್ನು ನ್ಯಾಯಾಲಯಕ್ಕೆ ಕರೆಸುತ್ತೇವೆ” ಎಂದು ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: ದ್ವೇಷ ಭಾಷಣ ಮಾಡಿದವರನ್ನು ಶಿಕ್ಷಿಸಬೇಕು; ಧರ್ಮ ಸಂಸದ್ ಇದಕ್ಕೆ ಹೊರತಲ್ಲ: ಆರ್ಎಸ್ಎಸ್ ಮುಖಂಡ
ಈ ಸಂಬಂಧ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಮಾರ್ಗಸೂಚಿಯನ್ನು ಅನುಸರಿಸಿ. ದ್ವೇಷದ ಭಾಷಣವನ್ನು ನಿಲ್ಲಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಿ” ಎಂದು ಅವರು ಬುಧವಾರದಂದು ನಿಗದಿಪಡಿಸಲಾದ ಸಮಾರಂಭಕ್ಕೆ ಮುಂಚಿತವಾಗಿ ತಿಳಿಸಲಾಗಿದೆ. ಪ್ರತ್ಯೇಕ ವಿಚಾರಣೆಯಲ್ಲಿ, ಈ ತಿಂಗಳ ಆರಂಭದಲ್ಲಿ ಮುಸ್ಲಿಮರ ವಿರುದ್ಧ ದ್ವೇಷಪೂರಿತ ಭಾಷಣಗಳು ಮತ್ತು ಹಿಂದೂಗಳು ಹಿಂಸಾಚಾರವನ್ನು ಆಶ್ರಯಿಸಲು ಕರೆ ನೀಡಿದ ಘಟನೆಯ ಕುರಿತು ಹಿಮಾಚಲ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗಂಭೀರ ಪ್ರಶ್ನೆಗಳನ್ನು ಕೇಳಿತು.
ಇದನ್ನೂ ಓದಿ: ದ್ವೇಷ ಭಾಷಣ: ಜಂತರ್ ಮಂತರ್ ರ್ಯಾಲಿ ಆಯೋಜಕ ಪ್ರೀತ್ ಸಿಂಗ್ ಗೆ ಜಾಮೀನು
“ಸರ್ಕಾರವು ಇಂತಹ ಚಟುವಟಿಕೆಯನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರವು ಯಾವುದೇ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಂಡಿದೆಯೇ ಅಥವಾ ಇಲ್ಲವೇ ಎಂಬುದನ್ನು ನಮಗೆ ತಿಳಿಸಬೇಕು” ಎಂದು ಹೇಳಿದ ನ್ಯಾಯಾಲಯವು, ಬೆಂಕಿಯಿಡುವ ಭಾಷಣಕಾರರ ವಿರುದ್ಧ ತಕ್ಷಣವೇ ಏಕೆ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಆಡಳಿತವನ್ನು ಪ್ರಶ್ನೆ ಮಾಡಿತು. ಸರ್ಕಾರವು ಮೇ 7ರೊಳಗೆ ಅಫಿಡವಿಟ್ ಸಲ್ಲಿಸಬೇಕು ಮತ್ತು ಅಂತಹ ಘಟನೆಗಳನ್ನು ತಡೆಯಲು ಯಾವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದನ್ನು ನಮಗೆ ತಿಳಿಸಬೇಕು’ ಎಂದು ಅದು ಹೇಳಿದ್ದು, ಮೇ 9 ರಂದು ಮತ್ತೆ ಪ್ರಕರಣದ ವಿಚಾರಣೆಯನ್ನು ನಡೆಸಲಾಗುವುದು.
ಇದನ್ನೂ ಓದಿ: 'ದ್ವೇಷ ಭಾಷಣ': ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ನೋಟೀಸ್
ಈ ಘಟನೆಗಳು ಇದ್ದಕ್ಕಿದ್ದಂತೆ ಸಂಭವಿಸುವುದಿಲ್ಲ. ಅವು ರಾತ್ರೋರಾತ್ರಿ ಸಂಭವಿಸುವುದಿಲ್ಲ. ಇವುಗಳನ್ನು ಮುಂಚಿತವಾಗಿ ಘೋಷಿಸಲಾಗುತ್ತದೆ. ನೀವು ಈಗಿನಿಂದಲೇ ಏಕೆ ಕಾರ್ಯನಿರ್ವಹಿಸಲಿಲ್ಲ? ಈಗಾಗಲೇ ಸುಪ್ರೀಂ ಕೋರ್ಟ್ನ ಮಾರ್ಗಸೂಚಿಗಳಾಗಿವೆ” ಎಂದು ನ್ಯಾಯಾಧೀಶರು ಹೇಳಿದ್ದಾರೆ.