social_icon

ಅಯೋಧ್ಯೆಯಲ್ಲಿನ ಮಸೀದಿಗಳಲ್ಲಿ ಆಕ್ಷೇಪಾರ್ಹ ವಸ್ತುಗಳ ಎಸೆದು ಗಲಭೆ ಸೃಷ್ಟಿಸಲು ಯತ್ನ: 7 ಮಂದಿ ಬಂಧನ

ಅಯೋಧ್ಯೆಯಲ್ಲಿರುವ ಮಸೀದಿಗಳ ಮುಂದೆ ಮಾಂಸ, ಪವಿತ್ರ ಗ್ರಂಥಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆದು ಗಲಭೆ ಸೃಷ್ಟಿಸಲು ಯತ್ನ ನಡೆಸಿದ್ದ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Published: 29th April 2022 11:20 AM  |   Last Updated: 29th April 2022 11:20 AM   |  A+A-


Seven people arrested by Ayodhya Police.

ಬಂಧಿತ ಆರೋಪಿಗಳೊಂದಿಗೆ ಪೊಲೀಸರು

Posted By : srinivasamurthy
Source : Online Desk

ಅಯೋಧ್ಯೆ: ಅಯೋಧ್ಯೆಯಲ್ಲಿರುವ ಮಸೀದಿಗಳ ಮುಂದೆ ಮಾಂಸ, ಪವಿತ್ರ ಗ್ರಂಥಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆದು ಗಲಭೆ ಸೃಷ್ಟಿಸಲು ಯತ್ನ ನಡೆಸಿದ್ದ 7 ಮಂದಿಯನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ನಗರದ ಮಸೀದಿಗಳ ಹೊರಗೆ ಹಸಿಮಾಂಸವನ್ನು ಸೇರಿದಂತೆ ಪವಿತ್ರ ಗ್ರಂಥದ ಚೂರುಗಳನ್ನು ಆರೋಪಿಗಳು ಎಸೆದು ಗಲಭೆಗೆ ಯೋಜನೆ ಹಾಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದು, ಸದ್ಯ, ಮಸೀದಿ ಆವರಣದಿಂದ ಆಕ್ಷೇಪಾರ್ಹ ವಸ್ತುಗಳನ್ನು ತೆರವುಗೊಳಿಸಲಾಗಿದೆ ಎಂದು ಹೇಳಿದ್ದಾರೆ. 

ಆರೋಪಿಗಳನ್ನು ಪ್ರತ್ಯೂಷ್ ಶ್ರೀವಾಸ್ತವ, ನಿತಿನ್ ಕುಮಾರ್, ದೀಪಕ್ ಕುಮಾರ್ ಗೌಡ್, ಬ್ರಿಜೇಶ್ ಪಾಂಡೆ, ಶತ್ರುಘ್ನ ಪ್ರಜಾಪತಿ ಮತ್ತು ವಿಮಲ್ ಪಾಂಡೆ ಎಂದು ಗುರ್ತಿಸಲಾಗಿದ್ದು, ಸಂಚಿನ ಮಾಸ್ಟರ್ ಮೈಂಡ್ ಹಿಂದಿ ಅಯೋಧ್ಯೆ ಸಂಘಟನೆ ಮುಖ್ಯಸ್ಥ ಮಹೇಶ್ ಕುಮಾರ್ ಮಿಶ್ರಾ ಅವರು ಹೇಳಿದ್ದಾರೆ.

ಪಿತೂರಿಯ ಭಾಗವಾಗಿರುವ 11 ಜನರನ್ನು ಗುರುತಿಸಲಾಗಿದೆ ಮತ್ತು ಪ್ರಸ್ತುತ ತಲೆಮರೆಸಿಕೊಂಡಿರುವ ಇತರ ನಾಲ್ವರನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಜಹಾಂಗೀರ್‌ಪುರಿ ಘಟನೆಯನ್ನು ವಿರೋಧಿಸಿ ಈ ಸಂಚು ರೂಪಿಸಲಾಗಿದೆ ಎಂದೂ ಹೇಳಲಾಗಿದೆ. 

ಎಲ್ಲಾ ಏಳು ಮಂದಿ ಆರೋಪಿಗಳ ವಿರುದ್ಧ ಕಠಿಣ ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್ಎಸ್ಎ) ಅಡಿಯಲ್ಲಿ ಆರೋಪ ಹೊರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 “ಪವಿತ್ರ ಸ್ಥಳಗಳ ಹೊರಗೆ ಆಕ್ಷೇಪಾರ್ಹ ವಸ್ತುಗಳನ್ನು ಎಸೆಯುವ ಮೂಲಕ ಎಂಟು ಜನರು ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ ತಮ್ಮ ಯೋಜನೆಯನ್ನು ಕಾರ್ಯಗತಗೊಳಿಸಿದ್ದಾರೆ. ಅವರಿಂದ ನಾಲ್ಕು ದ್ವಿಚಕ್ರವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ, ಅವರಲ್ಲಿ ಏಳು ಮಂದಿಯನ್ನು ಬಂಧಿಸಲಾಗಿದೆ.

ಪಿತೂರಿಯ ಭಾಗವಾಗಿರುವ ನಾಲ್ವರು ಪ್ರಸ್ತುತ ತಲೆಮರೆಸಿಕೊಂಡಿದ್ದಾರೆ. ಅವರ ವಿಚಾರಣೆಯ ಸಮಯದಲ್ಲಿ, ಅವರು ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡಲು ಬಯಸಿದ್ದರು ಎಂದು ತಿಳಿದುಬಂದಿದೆ. 

ಅದೃಷ್ಟವಶಾತ್ ಎಲ್ಲಾ ವಿಭಾಗಗಳು ಮತ್ತು ಸಮುದಾಯಗಳ ಜನರು ಒಗ್ಗೂಡಿದರು, ಸಹಕರಿಸಿದರು ಮತ್ತು ಅವರ ಯೋಜನೆಗಳನ್ನು ವಿಫಲಗೊಳಿಸಿದರು” ಎಂದು ಅಯೋಧ್ಯೆಯ ಎಸ್‌ಎಸ್‌ಪಿ ಶೈಲೇಶ್ ಪಾಂಡೆ ತಿಳಿಸಿದ್ದಾರೆ.


Stay up to date on all the latest ದೇಶ news
Poll

ಸಿದ್ದರಾಮಯ್ಯ ಸರ್ಕಾರದಿಂದ ಐದು ಗ್ಯಾರಂಟಿಗಳ ಜಾರಿ: ಇತರ ರಾಜ್ಯಗಳ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp