ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲ
ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.
Published: 03rd August 2022 01:07 PM | Last Updated: 03rd August 2022 01:11 PM | A+A A-

ಮಾಯಾವತಿ, ಜಗದೀಪ್ ಧಂಕರ್
ಲಖನೌ: ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.
ಇದನ್ನೂ ಓದಿ: ಉಪ ರಾಷ್ಟ್ರಪತಿ ಚುನಾವಣೆ: ಜಗದೀಪ್ ಧಂಕರ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರ ಉಪಸ್ಥಿತಿ!
ಸಾರ್ವಜನಿಕರ ಹಿತಾಸಕ್ತಿ ಮತ್ತು ತನ್ನ ಸ್ವಂತ ಚಳವಳಿ ನಿಟ್ಟನಲ್ಲಿ ಆಗಸ್ಟ್ 6 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬೆಂಬಲಿಸಲು ಬಿಎಸ್ ಪಿ ನಿರ್ಧರಿಸಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
1. सर्वविदित है कि देश के सर्वाेच्च राष्ट्रपति पद के लिए चुनाव में सत्ता व विपक्ष के बीच आम सहमति ना बनने की वजह से ही इसके लिए फिर अन्ततः चुनाव हुआ। अब ठीक वही स्थिति बनने के कारण उपराष्ट्रपति पद के लिए भी दिनांक 6 अगस्त को चुनाव होने जा रहा है। (1/2)
— Mayawati (@Mayawati) August 3, 2022
ವೆಂಕಯ್ಯನಾಯ್ಡು ಅವರ ಅಧಿಕಾರವಧಿ ಆಗಸ್ಟ್ 10 ರಂದು ಕೊನೆಯಾಗುವ ಹಿನ್ನೆಲೆಯಲ್ಲಿ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜಗದೀಪ್ ಧಂಕರ್ ಎನ್ ಡಿಎ ಅಭ್ಯರ್ಥಿಯಾದರೆ, ಮಾರ್ಗರೇಟ್ ಆಳ್ವಾ ವಿರೋಧಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.