ಉಪರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಗೆ ಬಿಎಸ್ ಪಿ ಬೆಂಬಲ

ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು  ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.
ಮಾಯಾವತಿ, ಜಗದೀಪ್ ಧಂಕರ್
ಮಾಯಾವತಿ, ಜಗದೀಪ್ ಧಂಕರ್

ಲಖನೌ: ಉಪ ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು  ಬಿಎಸ್ ಪಿ ಪಕ್ಷ ಬೆಂಬಲಿಸಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಘೋಷಿಸಿದ್ದಾರೆ.

ಸಾರ್ವಜನಿಕರ ಹಿತಾಸಕ್ತಿ ಮತ್ತು ತನ್ನ ಸ್ವಂತ ಚಳವಳಿ ನಿಟ್ಟನಲ್ಲಿ ಆಗಸ್ಟ್ 6 ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಜಗದೀಪ್ ಧಂಕರ್ ಅವರನ್ನು ಬೆಂಬಲಿಸಲು ಬಿಎಸ್ ಪಿ ನಿರ್ಧರಿಸಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.

ವೆಂಕಯ್ಯನಾಯ್ಡು ಅವರ ಅಧಿಕಾರವಧಿ ಆಗಸ್ಟ್ 10 ರಂದು ಕೊನೆಯಾಗುವ ಹಿನ್ನೆಲೆಯಲ್ಲಿ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ.  ಜಗದೀಪ್ ಧಂಕರ್  ಎನ್ ಡಿಎ ಅಭ್ಯರ್ಥಿಯಾದರೆ, ಮಾರ್ಗರೇಟ್ ಆಳ್ವಾ ವಿರೋಧಪಕ್ಷಗಳ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com