ಉತ್ತರ ಪ್ರದೇಶ: ಗೋಶಾಲೆಯಲ್ಲಿ 50ಕ್ಕೂ ಹೆಚ್ಚು ಜಾನುವಾರಗಳು ಸಾವು, ತನಿಖೆಗೆ ಯೋಗಿ ಆದೇಶ

ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಪ್ರದೇಶದ ಗೋಶಾಲೆಯಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ನಿಗೂಢವಾಗಿ ಸಾವನ್ನಪ್ಪಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಅಮ್ರೋಹಾ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಪ್ರದೇಶದ ಗೋಶಾಲೆಯಲ್ಲಿ 50ಕ್ಕೂ ಹೆಚ್ಚು ಜಾನುವಾರುಗಳು ನಿಗೂಢವಾಗಿ ಸಾವನ್ನಪ್ಪಿವೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಿಗೂಢವಾಗಿ ಸಾವನ್ನಪ್ಪಿದ ಜಾನುವಾರುಗಳ ತನಿಖೆಗೆ ಆದೇಶಿಸಿದ್ದು, ಪಶುಸಂಗೋಪನಾ ಸಚಿವ ಧರಂ ಪಾಲ್ ಸಿಂಗ್ ಅವರು ಅಮ್ರೋಹಾಗೆ ತೆರಳಿ ಪರಿಶೀಲನೆ ನಡೆಸಿದರು.

ಮೇವು ತಿಂದ ಹಸುಗಳು ಸಂಜೆ ಅಸ್ವಸ್ಥಗೊಂಡಿವೆ ಎಂದು ಅಮ್ರೋಹದ ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿ.ಕೆ.ತ್ರಿಪಾಠಿ ತಿಳಿಸಿದ್ದಾರೆ. ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಹಾಗೂ ಪಶು ವೈದ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಿದ್ದಾರೆ.

ಗೋಶಾಲೆಯಲ್ಲಿ 50ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಲಾಂಗೆಹ್ ಖಚಿತಪಡಿಸಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಬಿ.ಕೆ.ತ್ರಿಪಾಠಿ ಅವರ ಪ್ರಕಾರ, ಗೋಶಾಲೆಯ ಆಡಳಿತವು ತಾಹಿರ್ ಎಂಬ ವ್ಯಕ್ತಿಯಿಂದ ಮೇವನ್ನು ಸಂಗ್ರಹಿಸಿದೆ. ತಾಹಿರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆತನನ್ನು ಬಂಧಿಸಲು ಪ್ರಯತ್ನಿಸಲಾಗುತ್ತಿದೆ. ಗೋಶಾಲೆಯ ಉಸ್ತುವಾರಿ ಹೊತ್ತಿರುವ ಗ್ರಾಮಾಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com