ಆ.14 ದೇಶ 'ವಿಭಜನೆಯ ಕರಾಳ ದಿನ' ಎಂದು ಬಿಜೆಪಿ ವಿಡಿಯೊ ಬಿಡುಗಡೆ: ಕಾಂಗ್ರೆಸ್ ತಿರುಗೇಟು
ಇಂದು ಆಗಸ್ಟ್ 14 ಭಾರತ-ಪಾಕಿಸ್ತಾನ ವಿಭಜನೆಗೊಂಡ ದಿನವನ್ನು ವಿಭಜನೆ ಕರಾಳ ದಿನವನ್ನಾಗಿ ಆಚರಿಸಲಾಗುವುದು ಎಂದು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.
Published: 14th August 2022 01:45 PM | Last Updated: 14th August 2022 01:52 PM | A+A A-

ಜವಹರಲಾಲ್ ನೆಹರೂ(ಸಂಗ್ರಹ ಚಿತ್ರ)
ನವದೆಹಲಿ: ಇಂದು ಆಗಸ್ಟ್ 14 ಭಾರತ-ಪಾಕಿಸ್ತಾನ ವಿಭಜನೆಗೊಂಡ ದಿನವನ್ನು ವಿಭಜನೆ ಕರಾಳ ದಿನವನ್ನಾಗಿ ಆಚರಿಸಲಾಗುವುದು ಎಂದು ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.
ದೇಶ ವಿಭಜನೆಯ ವೇಳೆ ಜನತೆ ಅನುಭವಿಸಿದ ಕಷ್ಟ ಮತ್ತು ತ್ಯಾಗಗಳನ್ನು ಸ್ಮರಿಸುವ ಸಲುವಾಗಿ ಪ್ರತಿ ವರ್ಷ ಆಗಸ್ಟ್ ೧೪ ರಂದು ಈ ದಿನ ಆಚರಿಸಲಾಗುತ್ತದೆ. ಈ ಸಂದರ್ಭದಲ್ಲಿ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದು ಅವರನ್ನು ಸ್ಮರಿಸಲಾಗುತ್ತದೆ. ’ವಿಭಜನೆಯ ಭಯಾನಕ ನೆನಪಿನ ದಿನ’ದ ಅಂಗವಾಗಿ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ವಿಭಜನೆಯ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
Today, on #PartitionHorrorsRemembranceDay, I pay homage to all those who lost their lives during Partition , and applaud the resilience as well as grit of all those who suffered during that tragic period of our history.
— Narendra Modi (@narendramodi) August 14, 2022
ಆಗಸ್ಟ್ 14ನ್ನು ದೇಶ ವಿಭಜನೆಯ ಕರಾಳ ನೆನಪಿನ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ವರ್ಷವೇ ಘೋಷಣೆ ಮಾಡಿದ್ದರು. ಅದರಂತೆ ಬಿಜೆಪಿ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ದಿನವನ್ನು ಹಲವು ರೀತಿಯಲ್ಲಿ ವಿಶ್ಲೇಷಿಸಿ ಟ್ವೀಟ್ ಮಾಡುತ್ತಿದ್ದಾರೆ.
ಪಾಕಿಸ್ತಾನವನ್ನು 14 ಆಗಸ್ಟ್ 1947 ರಂದು ಮತ್ತು ಭಾರತವನ್ನು 15 ಆಗಸ್ಟ್ 1947 ರಂದು ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಲಾಯಿತು. ಈ ವಿಭಜನೆಯ ಮೂಲಕ ಭಾರತವನ್ನು ಎರಡು ಭಾಗಗಳಾಗಿ ವಿಂಗಡಿಸುವುದರ ಜೊತೆಗೆ ಬಂಗಾಳವನ್ನು ಕೂಡ ವಿಭಜಿಸಲಾಯಿತು. ಬಂಗಾಳದ ಪೂರ್ವ ಭಾಗವನ್ನು ಭಾರತದಿಂದ ಬೇರ್ಪಡಿಸಿ ಪೂರ್ವ ಪಾಕಿಸ್ತಾನವನ್ನು ರೂಪಿಸಲಾಯಿತು, ಅದು 1971 ರ ಯುದ್ಧದ ನಂತರ ಬಾಂಗ್ಲಾದೇಶವಾಯಿತು.
ಬಿಜೆಪಿ ವಿಡಿಯೊ ಬಿಡುಗಡೆ: ಈ ಬಾರಿ ‘ದೇಶ ವಿಭಜನೆಯ ಕರಾಳ ನೆನಪಿನ ದಿನ’ ಪ್ರಯುಕ್ತ ಬಿಜೆಪಿ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದು, 1947 ರಲ್ಲಿ ಭಾರತದ ವಿಭಜನೆಗೆ ಕಾರಣವಾದ ಘಟನೆಗಳನ್ನು ವಿವರಿಸಿದೆ. ಹಿಂದಿನ ಘಟನೆಗಳ ವಿಡಿಯೊ ತುಣುಕು ಬಳಸಿ ಮತ್ತು ವಿಭಜನೆಯ ನಾಟಕೀಯ ದೃಶ್ಯಗಳಿರುವ ಏಳು ನಿಮಿಷಗಳ ವಿಡಿಯೊವು ಪಾಕಿಸ್ತಾನದ ರಚನೆಗಾಗಿ ಮುಹಮ್ಮದ್ ಅಲಿ ಜಿನ್ನಾ ನೇತೃತ್ವದ ಮುಸ್ಲಿಂ ಲೀಗ್ನ ಬೇಡಿಕೆಗಳಿಗೆ ಜವಾಹರ್ಲಾಲ್ ನೆಹರು (Jawaharlal Nehru) ಒಪ್ಪಿರುವುದನ್ನು ವಿಡಿಯೊದಲ್ಲಿ ದೂಷಿಸಲಾಗಿದೆ.
जिन लोगों को भारत की सांस्कृतिक विरासत, सभ्यता, मूल्यों, तीर्थों का कोई ज्ञान नहीं था, उन्होंने मात्र तीन सप्ताह में सदियों से एक साथ रह रहे लोगों के बीच सरहद खींच दी।
— BJP (@BJP4India) August 14, 2022
उस समय कहाँ थे वे लोग जिन पर इन विभाजनकारी ताक़तों के ख़िलाफ़ संघर्ष करने की ज़िम्मेदारी थी?#विभाजन_विभीषिका pic.twitter.com/t1K6vInZzQ
ಅದಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, ಈ ದಿನವನ್ನು ಗುರುತಿಸುವ ಪ್ರಧಾನ ಮಂತ್ರಿಯ ನಿಜವಾದ ಉದ್ದೇಶ ಅತ್ಯಂತ ಆಘಾತಕಾರಿ ಐತಿಹಾಸಿಕ ಘಟನೆಗಳನ್ನು ತಮ್ಮ ಪ್ರಸ್ತುತ ರಾಜಕೀಯ ಹೋರಾಟಗಳಿಗೆ ಬಳಸಿಕೊಳ್ಳುವುದಾಗಿದೆ ಎಂದಿದ್ದಾರೆ.
ವಿಭಜನೆಯ ದುರಂತವನ್ನು ದ್ವೇಷ ಮತ್ತು ಪೂರ್ವಗ್ರಹವನ್ನು ಉತ್ತೇಜಿಸಲು ದುರುಪಯೋಗ ಮಾಡಬಾರದು ಎಂದಿದ್ದಾರೆ. ಸತ್ಯ ಏನೆಂದರೆ ಎರಡು ದೇಶದ ಕಲ್ಪನೆ ಮಾಡಿದ್ದು ಸಾವರ್ಕರ್, ಜಿನ್ನಾ ಅದನ್ನು ಕಾರ್ಯಪ್ರವೃತ್ತ ಮಾಡಿದರು. ನಾವು ವಿಭಜನೆಯನ್ನು ಒಪ್ಪದೇ ಇದ್ದರೆ, ಭಾರತ ಹಲವಾರು ತುಂಡುಗಳಾಗಿ ವಿಭಜನೆಯಾಗಿ ಇಡೀ ನಾಶವಾಗಿ ಬಿಡುತ್ತಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಜನ ಸಂಘದ ಸಂಸ್ಥಾಪಕ ಶ್ಯಾಮ ಪ್ರಸಾದ್ ಮುಖರ್ಜಿ ಅವರನ್ನೂ ನೆನಪಿಸಿಕೊಳ್ಳಬೇಕು. ಯಾಕೆಂದರೆ ಅವರು ಶರತ್ ಚಂದ್ರ ಬೋಸ್ ಅವರ ಆಗ್ರಹಕ್ಕೆ ವಿರುದ್ಧವಾಗಿ ಬಂಗಾಳವನ್ನು ವಿಭಜಿಸಿದರು. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್, ಗಾಂಧಿ, ನೆಹರು, ಪಟೇಲ್ ಮತ್ತು ರಾಷ್ಟ್ರವನ್ನು ಒಗ್ಗೂಡಿಸುವ ಪ್ರಯತ್ನದಲ್ಲಿ ಅವಿರತರಾಗಿದ್ದ ಅನೇಕರ ಪರಂಪರೆಯನ್ನು ಎತ್ತಿ ಹಿಡಿಯುತ್ತದೆ. ದ್ವೇಷದ ರಾಜಕಾರಣವನ್ನು ಹಿಮ್ಮೆಟ್ಟಿಸುತ್ತೇವೆ ಎಂದಿದ್ದಾರೆ.
'विभाजन विभीषिका स्मृति दिवस #PartitionHorrorsRemembranceDay 'पर एक ऐतिहासिक दस्तावेज हाथ लगा है। जिसमें सावरकर जिन्ना को पाकिस्तान की मांग करने के लिए बधाई दे रहे हैं !
— Amrish Ranjan Pandey (@pandey_amrish) August 14, 2022
इस ऐतिहासिक दस्तावेज पर संघ परिवार के लोगों की क्या राय है? क्या सावरकर और जिन्ना एक दूसरे के पूरक नहीं हैं? pic.twitter.com/R3CDOXTuqi