social_icon

'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ತಿವಿದ ಪ್ರಧಾನಿ ಮೋದಿ

ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದ್ದು, ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ.

Published: 15th August 2022 09:45 AM  |   Last Updated: 28th December 2022 11:12 AM   |  A+A-


PM Modi at Red Fort02

ಪ್ರಧಾನಿ ಮೋದಿ ಭಾಷಣ

Posted By : srinivasamurthy
Source : Online Desk

ನವದೆಹಲಿ: ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ವಿಪಕ್ಷ ಕಾಂಗ್ರೆಸ್ ಗೆ ಪರೋಕ್ಷವಾಗಿ ತಿವಿದಿದ್ದು, ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳಾಗಿವೆ ಎಂದು ಹೇಳಿದ್ದಾರೆ.

ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, 'ಭಾರತದಲ್ಲಿ ಕುಟುಂಬ ರಾಜಕಾರಣದಿಂದ ನಮ್ಮ ದೇಶದ ಪ್ರತಿಭೆ, ಸಾಮರ್ಥ್ಯ ಹಾಳಾಗುತ್ತಿದೆ. ಭ್ರಷ್ಟಾಚಾರಕ್ಕೆ ಇದೂ ಒಂದುಕಾರಣವಾಗುತ್ತಿದೆ ಎಂದರು. 

ಇದನ್ನೂ ಓದಿ: ತ್ರಿವರ್ಣದ ಪೇಟ ಧರಿಸಿ ದೆಹಲಿಯ ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ!

'ಭಾರತದಲ್ಲಿ ಕುಟುಂಬ ರಾಜಕಾರಣದಿಂದ ನಮ್ಮ ದೇಶದ ಪ್ರತಿಭೆ, ಸಾಮರ್ಥ್ಯ ಹಾಳಾಗುತ್ತಿದೆ. ಭ್ರಷ್ಟಾಚಾರಕ್ಕೆ ಇದೂ ಒಂದುಕಾರಣವಾಗುತ್ತಿದೆ. ಪರಿವಾರವಾದದಿಂದಲೂ ನಾವು ಬಿಡಿಸಿಕೊಳ್ಳಬೇಕು. ನಾವು ನಮ್ಮ ಸಂಸ್ಥೆಗಳನ್ನು ಉಳಿಸಿಕೊಳ್ಳಬೇಕು. ರಾಜಕಾರಣದಲ್ಲಿಯೂ ಪರಿವಾರವಾದವು ಪರಿವಾರ ಭದ್ರಪಡಿಸಿಕೊಳ್ಳಲು ಯತ್ನಿಸುತ್ತದೆಯೇ ಹೊರತು ದೇಶದ ಅಭಿವೃದ್ಧಿಗೆ ಗಮನ ಕೊಡುವುದಿಲ್ಲ. ಬನ್ನಿ, ಭಾರತದ ರಾಜಕಾರಣವನ್ನು ಶುದ್ಧೀಕರಣಗೊಳಿಸಲು ನಾವು ದೇಶದ ಪರಿವಾರವಾದವನ್ನು ಕೊನೆಗಾಣಿಸೋಣ. ಇದು ಇಂದಿನ ಅನಿವಾರ್ಯತೆ ಎಂದರು.

ಭ್ರಷ್ಟಾಚಾರಕ್ಕೆ ಜಾಗೃತಿಯ ಮದ್ದು
ಅಂತೆಯೇ ಸಮಾಜದಲ್ಲಿ ಎಲ್ಲಿಯವರೆಗೆ ಭ್ರಷ್ಟಾಚಾರದ ಬಗ್ಗೆ ಅಸಹ್ಯದ ಭಾವನೆ ಬರಬೇಕು. ಸಮಾಜದಲ್ಲಿ ಭ್ರಷ್ಟಾಚಾರಿಗಳಿಗೆ ಗೌರವ ಇಲ್ಲದ ವಾತಾವರಣ ಮೂಡಬೇಕು. ಭ್ರಷ್ಟಾಚಾರದ ಬಗ್ಗೆ ಜಾಗ್ರತೆ ಬರಬೇಕು ಎಂದರು.

ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ: ಪ್ರಧಾನಿ ಮೋದಿ

ನಮ್ಮ ರಾಜ್ಯಗಳ ನಡುವೆ ಆರೋಗ್ಯಕರ ಸ್ಪರ್ಧೆಯೂ ಇರಬೇಕು
ಸಂವಿಧಾನ ನಿರ್ಮಾರ್ತೃಗಳನ್ನು ನಾನು ಗೌರವಿಸುತ್ತೇನೆ. ಕಾಲಘಟ್ಟ ಬೇರೆ ಇದ್ದರೂ ನಮ್ಮ ಆಶಯಗಳು ಪ್ರತ್ಯೇಕ ಅಲ್ಲ. ಭಾರತದ ಅಭಿವೃದ್ಧಿ ಎನ್ನುವುದು ನಾವು ಎಲ್ಲಿಯೇ ಇದ್ದರೂ ಗಮನದಲ್ಲಿ ಇಟ್ಟುಕೊಳ್ಳಬೇಕು. ನಮ್ಮ ದೇಶದ ಹಲವು ರಾಜ್ಯಗಳು ಒಕ್ಕೂಟ ವ್ಯವಸ್ಥೆಯ ಬಲ ಹೆಚ್ಚಿಸಿವೆ. ನಾವು ಸಹಕಾರದ ಒಕ್ಕೂಟ ವ್ಯವಸ್ಥೆಯ ಜೊತೆಗೆ ನಮ್ಮ ರಾಜ್ಯಗಳಲ್ಲಿ ಆರೋಗ್ಯಕರ ಸ್ಪರ್ಧೆಯೂ ಇರಬೇಕು. ನಮ್ಮ ರಾಜ್ಯಗಳ ನಡುವೆ, ಸರ್ಕಾರಿ ಸೇವೆಗಳ ವಿಚಾರದಲ್ಲಿ ಸ್ಪರ್ಧೆಯ ವಾತಾವರಣ ಇರಬೇಕು ಎಂದು ನರೇಂದ್ರ ಮೋದಿ ಹೇಳಿದರು.

ಸ್ವಾವಲಂಬನೆಯ ಮಂತ್ರ ಜನಾಂದೋಲನ ಆಗಬೇಕು
ಪುಟ್ಟ ಮಕ್ಕಳಿಗೂ ನಾನು ನಮನ ಸಲ್ಲಿಸುತ್ತೇನೆ. ಮನೆಗಳಲ್ಲಿ ಐದು ವರ್ಷದ ಮಗು ವಿದೇಶಿ ಆಟಿಕೆಗಳಲ್ಲಿ ಆಡುವುದಿಲ್ಲ ಎಂದು ಸಂಕಲ್ಪ ಮಾಡಿದಾಗ ಆತ್ಮ ನಿರ್ಭರ್ ಭಾರತದ ಆಶಯ ಈಡೇರುತ್ತದೆ. ಉದ್ಯೋಗದ ಹೊಸ ಸಾಧ್ಯತೆಗಳು ಕಂಡುಬರುತ್ತಿವೆ. ಭಾರತವು ತಯಾರಿಕಾ ಕೇಂದ್ರ (ಮ್ಯಾನ್ಯುಫ್ಯಾಕ್ಚರಿಂಗ್ ಹಬ್) ಆಗುತ್ತಿದೆ. ಮೊಬೈಲ್ ಸೇರಿದಂತೆ ಹಲವು ಉಪಕರಣಗಳು ಇಲ್ಲಿಯೇ ತಯಾರಾಗುತ್ತಿವೆ. ನಾವು ವಿದ್ಯುತ್ ಕ್ಷೇತ್ರದಲ್ಲಿಯೂ ಸ್ವಾವಲಂಬಿ ಆಗಬೇಕಿದೆ ಎಂದರು.

ಇದನ್ನೂ ಓದಿ: 76ನೇ ಸ್ವಾತಂತ್ರ್ಯೋತ್ಸವ; ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

ಸ್ವರಾಜ್ಯದಿಂದ ಸುರಾಜ್ಯ
ಇಂದು ಮಹರ್ಷಿ ಅರವಿಂದರ ಜನ್ಮದಿನವೂ ಹೌದು. ‘ಸ್ವದೇಶಿಯಿಂದ ಸ್ವರಾಜ್ಯ, ಸ್ವರಾಜ್ಯದಿಂದ ಸುರಾಜ್ಯ’ ಎನ್ನುವುದು ಅವರು ಕೊಟ್ಟ ಮಂತ್ರ. ನಾವು ಸ್ವಾವಲಂಬಿಗಳಾಗಬೇಕು. ದೇಶಕ್ಕೆ ಅನ್ನದ ಅಗತ್ಯವಿದ್ದಾಗ ನಾವು ಬೇರೆ ಕಡೆಯಿಂದ ತರಿಸಿಕೊಳ್ಳಲು ಆಗುವುದಿಲ್ಲ. ಹೀಗಾಗಿ ಆತ್ಮನಿರ್ಭರ್ ಭಾರತ್ ಎನ್ನುವುದು ಎಲ್ಲ ನಾಗರಿಕರು, ಎಲ್ಲ ಸರ್ಕಾರಗಳ ಜವಾಬ್ದಾರಿ ಆಗಬೇಕು. ಆತ್ಮನಿರ್ಭರ್ ಭಾರತ್ ಸರ್ಕಾರಿ ಕಾರ್ಯಕ್ರಮ ಅಲ್ಲ. ಇದು ಸಮಾಜದ ಜನಾಂದೋಲನ. 75 ವರ್ಷಗಳ ನಂತರ ಕೆಂಪುಕೋಟೆಯಲ್ಲಿ ಭಾರತದಲ್ಲಿ ತಯಾರಾದ ತೋಪುಗಳಿಂದ ಗೌರವ ಸಲ್ಲಿಕೆಯಾಗುತ್ತಿದೆ ಎಂದರು.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp