social_icon

ಹರ್ ಘರ್ ತಿರಂಗಾ ಅಭಿಯಾನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ: ಪ್ರಧಾನಿ ಮೋದಿ

ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

Published: 15th August 2022 08:13 AM  |   Last Updated: 15th August 2022 09:34 AM   |  A+A-


PM Modi at Red Fort

ಪ್ರಧಾನಿ ಮೋದಿ ಭಾಷಣ

Posted By : srinivasamurthy
Source : ANI

ನವದೆಹಲಿ: ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಹೇಳಿದರು.

ಇದನ್ನೂ ಓದಿ: 76ನೇ ಸ್ವಾತಂತ್ರ್ಯೋತ್ಸವ; ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನಿ ಮೋದಿ

'ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನ. ಈ ಕರ್ತವ್ಯದ ಹಾದಿಯಲ್ಲಿ ಜೀವ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಅವರಿಗೆ ನಾಗರಿಕರು ಕೃತಜ್ಞತೆ ಸಲ್ಲಿಸುತ್ತೇನೆ. ಅಂತೆಯೇ ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಬ್ರಿಟಿಷರ ಆಳ್ವಿಕೆಯ ಬುನಾದಿ ಬುಡಮೇಲು ಮಾಡಿದ ನಮ್ಮ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ಈ ರಾಷ್ಟ್ರ ಕೃತಜ್ಞವಾಗಿದೆ.

‘ಆಜಾದಿ ಮಹೋತ್ಸವ’ದ ಸಂದರ್ಭದಲ್ಲಿ ನಾವು ನಮ್ಮ ಅನೇಕ ರಾಷ್ಟ್ರನಾಯಕರನ್ನು ಸ್ಮರಿಸಿದ್ದೇವೆ. ಆಗಸ್ಟ್ 14 ರಂದು, ನಾವು ವಿಭಜನೆಯ ಭೀಕರತೆಯನ್ನು ನೆನಪಿಸಿಕೊಂಡಿದ್ದೇವೆ. ಕಳೆದ 75 ವರ್ಷಗಳಲ್ಲಿ ನಮ್ಮ ದೇಶವನ್ನು ಮುನ್ನಡೆಸಲು ಕೊಡುಗೆ ನೀಡಿದ ದೇಶದ ಎಲ್ಲಾ ನಾಗರಿಕರನ್ನು ಇಂದು ನೆನಪಿಸಿಕೊಳ್ಳುವ ದಿನವಾಗಿದೆ. ರಾಣಿ ಲಕ್ಷ್ಮೀಬಾಯಿ, ಝಲ್ಕರಿ ಬಾಯಿ, ಚೆನ್ನಮ್ಮ, ಬೇಗಂ ಹಜರತ್ ಮಹಲ್ ಆಗಿರಲಿ, ಭಾರತದ ಮಹಿಳೆಯರ ಶಕ್ತಿಯನ್ನು ನೆನಪಿಸಿಕೊಂಡಾಗ ಪ್ರತಿ ಭಾರತವೂ ಹೆಮ್ಮೆಯಿಂದ ತುಂಬುತ್ತದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಅಥವಾ ದೇಶವನ್ನು ಕಟ್ಟಿದವರು -ಡಾ ರಾಜೇಂದ್ರ ಪ್ರಸಾದ್, ನೆಹರೂ ಜಿ, ಸರ್ದಾರ್ ಪಟೇಲ್, ಎಸ್ಪಿ ಮುಖರ್ಜಿ, ಎಲ್ಬಿ ಶಾಸ್ತ್ರಿ, ದೀನದಯಾಳ್ ಉಪಾಧ್ಯಾಯ, ಜೆಪಿ ನಾರಾಯಣ್, ಆರ್ಎಂ ಲೋಹಿಯಾ, ವಿನೋಬಾ ಭಾವೆ, ನಾನಾಜಿ ದೇಶಮುಖ್, ಸುಬ್ರಮಣ್ಯ ಭಾರತಿ - ಇದು ದಿನ. ಅಂತಹ ಮಹಾನ್ ವ್ಯಕ್ತಿಗಳ ಮುಂದೆ ತಲೆಬಾಗುತ್ತೇವೆ ಎಂದರು.

ಇದನ್ನೂ ಓದಿ: ಪ್ರಜಾಪ್ರಭುತ್ವದ ನಿಜವಾದ ಸಾಮರ್ಥ್ಯ ತಿಳಿಯಲು ಜಗತ್ತಿಗೆ ಸಹಾಯ ಮಾಡಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಭಾಷಣದಲ್ಲಿ ರಾಷ್ಟ್ರಕವಿ ಕುವೆಂಪು ಕರೆ ಉಲ್ಲೇಖ

ಅಂತೆಯೇ 'ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದೆ ಮತ್ತು ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ. ನಮ್ಮ ದೇಶದ ಜನರು ಅನೇಕ ಪ್ರಯತ್ನಗಳನ್ನು ಮಾಡಿದರು. ಆದರೆ ಅವರು ಎಂದೂ ತಮ್ಮ ಸಂಕಲ್ಪ ಬಿಡಲಿಲ್ಲ ಮತ್ತು ಅವರ ಸಂಕಲ್ಪಗಳ ಕಾರ್ಯಸಾಧನೆಗೆ ನಿರತಂರವಾಗಿ ಶ್ರಮಿಸಿದರು. ಅದನ್ನು ಮಸುಕಾಗಲು ಬಿಡಲಿಲ್ಲ. ನಾವು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುವಾಗ, ನಾವು ಬುಡಕಟ್ಟು ಸಮುದಾಯವನ್ನು ಮರೆಯಲು ಸಾಧ್ಯವಿಲ್ಲ. ಭಗವಾನ್ ಬಿರ್ಸಾ ಮುಂಡಾ, ಸಿಧು-ಕನ್ಹು, ಅಲ್ಲೂರಿ ಸೀತಾರಾಮ ರಾಜು, ಗೋವಿಂದ್ ಗುರು - ಸ್ವಾತಂತ್ರ್ಯ ಹೋರಾಟದ ಧ್ವನಿಯಾದ ಅಸಂಖ್ಯಾತ ಹೆಸರುಗಳು ಮತ್ತು ಬುಡಕಟ್ಟು ಸಮುದಾಯವನ್ನು ಮಾತೃಭೂಮಿಗಾಗಿ ಬದುಕಲು ಮತ್ತು ಸಾಯಲು ಪ್ರೇರೇಪಿಸಿದರು ಎಂದರು.

ಇದನ್ನೂ ಓದಿ: ಪ್ರಧಾನಿ ಮೋದಿಯವರು ಅಂದಿನ ಆಘಾತಕಾರಿ ಘಟನೆಗಳನ್ನು ರಾಜಕೀಯ ಕದನಗಳಿಗೆ ಮೇವಾಗಿ ಬಳಸುತ್ತಿದ್ದಾರೆ: ಕಾಂಗ್ರೆಸ್

ನಮ್ಮ ಅಭಿವೃದ್ಧಿಯನ್ನು ಅನುಮಾನಿಸಿದ್ದರು
ನಾವು ಸ್ವಾತಂತ್ರ್ಯವನ್ನು ಪಡೆದಾಗ ನಮ್ಮ ಅಭಿವೃದ್ಧಿಯ ಬಗ್ಗೆ ಹಲವರು ಅನುಮಾನಿಸಿದ್ದರು. ನಮ್ಮ ಅಭಿವೃದ್ಧಿಯ ಪಥವನ್ನು ಅನುಮಾನಿಸುವ ಅನೇಕ ಸಂದೇಹವಾದಿಗಳು ಇದ್ದರು. ಆದರೆ, ಈ ನಾಡಿನ ಜನರಲ್ಲಿ ವಿಶೇಷತೆ ಇದೆ ಎಂದು ಅವರಿಗೆ ತಿಳಿದಿರಲಿಲ್ಲ. ಈ ಮಣ್ಣಿನ ವಿಶೇಷ ಏನೆಂಬುದು ಅವರಿಗೆ ಗೊತ್ತಿರಲಿಲ್ಲ. ಭಾರತವು ಮಹತ್ವಾಕಾಂಕ್ಷೆಯ ರಾಷ್ಟ್ರ. ಒಗ್ಗಟ್ಟಿನ ಮನೋಭಾವದೊಂದಿಗೆ ಬದಲಾವಣೆಗಳನ್ನು ತರಲಾಗುತ್ತಿದೆ. ಭಾರತದ ನಾಗರಿಕರು ಸಕಾರಾತ್ಮಕ ಬದಲಾವಣೆಗಳನ್ನು ಬಯಸುತ್ತಾರೆ ಮತ್ತು ಅದಕ್ಕೆ ಕೊಡುಗೆ ನೀಡಲು ಬಯಸುತ್ತಾರೆ. ಪ್ರತಿ ಸರ್ಕಾರವು ಈ ಮಹತ್ವಾಕಾಂಕ್ಷೆಯ ಸಮಾಜವನ್ನು ಪರಿಹರಿಸಬೇಕಾಗಿದೆ ಎಂದರು.

'ತ್ರಿಶಕ್ತಿ'ಯ ಪ್ರಸ್ತಾಪ
ಮಹತ್ವಾಕಾಂಕ್ಷೆ, ನವೋದಯ ಮತ್ತು ವಿಶ್ವದ ನಿರೀಕ್ಷೆ ಎಂಬ 'ತ್ರಿಶಕ್ತಿ' ಬಗ್ಗೆ ಮೋದಿ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.  ಕೋವಿಡ್‌ ವಿರುದ್ಧ ಹೋರಾಡಲು ನಾಗರಿಕರು ಒಗ್ಗೂಡಿದ್ದರು. ವೈದ್ಯರನ್ನು ಬೆಂಬಲಿಸುವುದರಿಂದ ಹಿಡಿದು ದೂರದ ಭಾಗಗಳಿಗೆ ಲಸಿಕೆಗಳನ್ನು ತಲುಪಿಸುವವರೆಗೆ ನಾವು ಸಾಂಕ್ರಾಮಿಕದ ವಿರುದ್ಧ ಒಟ್ಟಾಗಿ ಹೋರಾಡಿದ್ದೇವೆ. ಈ 75 ವರ್ಷಗಳ ಪಯಣದಲ್ಲಿ, ಭರವಸೆಗಳು, ಆಕಾಂಕ್ಷೆಗಳು, ಎತ್ತರ ಮತ್ತು ತಗ್ಗುಗಳ ನಡುವೆ ನಾವು ಎಲ್ಲರ ಪ್ರಯತ್ನದಿಂದ ನಾವು ಎಲ್ಲಿಗೆ ತಲುಪಿದ್ದೇವೆ. 2014 ರಲ್ಲಿ, ನಾಗರಿಕರು ನನಗೆ ಜವಾಬ್ದಾರಿಯನ್ನು ನೀಡಿದರು. ಸ್ವಾತಂತ್ರ್ಯದ ನಂತರ ಜನಿಸಿದ ಮೊದಲ ವ್ಯಕ್ತಿ ಕೆಂಪು ಕೋಟೆಯಿಂದ ಈ ದೇಶದ ನಾಗರಿಕರನ್ನು ಹಾಡಿ ಹೊಗಳುವ ಅವಕಾಶವನ್ನು ಪಡೆದರು ಎಂದರು.

ಇದನ್ನೂ ಓದಿ: ಆ.14 ದೇಶ 'ವಿಭಜನೆಯ ಕರಾಳ ದಿನ' ಎಂದು ಬಿಜೆಪಿ ವಿಡಿಯೊ ಬಿಡುಗಡೆ: ಕಾಂಗ್ರೆಸ್ ತಿರುಗೇಟು

ಪಂಚಪ್ರಾಣ-2047ಕ್ಕೆ 5 ಪ್ರತಿಜ್ಞೆ 
ಮುಂಬರುವ ವರ್ಷಗಳಲ್ಲಿ, ನಾವು 'ಪಂಚಪ್ರಾಣ'ದ ಮೇಲೆ ಕೇಂದ್ರೀಕರಿಸಬೇಕಾಗಿದೆ. ಮೊದಲನೆಯದಾಗಿ, ಅಭಿವೃದ್ಧಿ ಹೊಂದಿದ ಭಾರತದ ದೊಡ್ಡ ಸಂಕಲ್ಪಗಳು ಮತ್ತು ಸಂಕಲ್ಪದೊಂದಿಗೆ ಮುಂದುವರಿಯಲು; ಎರಡನೆಯದಾಗಿ, ಗುಲಾಮಗಿರಿಯ ಎಲ್ಲಾ ಕುರುಹುಗಳನ್ನು ಅಳಿಸಿಹಾಕಬೇಕು; ಮೂರನೆಯದಾಗಿ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು; ನಾಲ್ಕನೇ, ಏಕತೆಯ ಶಕ್ತಿ ಮತ್ತು ಐದನೇ, ಪ್ರಧಾನಿ ಮತ್ತು ಮುಖ್ಯಮಂತ್ರಿಗಳನ್ನು ಒಳಗೊಂಡಿರುವ ನಾಗರಿಕರ ಕರ್ತವ್ಯಗಳಾಗಿವೆ ಎಂದು ಪ್ರಧಾನಿ ಮೋದಿ ಹೇಳಿದರು.

ಇದನ್ನೂ ಓದಿ: 'ಹರ್ ಘರ್ ತಿರಂಗಾ' ಅಭಿಯಾನ: ಧ್ವಜಗಳ ಗೌರವಯುತ ವಿಲೇವಾರಿಯ ಚಿಂತೆ

ಇಂದು, ಡಿಜಿಟಲ್ ಇಂಡಿಯಾ ಉಪಕ್ರಮವನ್ನು ನಾವು ನೋಡುತ್ತಿದ್ದೇವೆ, ದೇಶದಲ್ಲಿ ಸ್ಟಾರ್ಟ್‌ಅಪ್‌ಗಳು ಬೆಳೆಯುತ್ತಿವೆ ಮತ್ತು ಶ್ರೇಣಿ 2 ಮತ್ತು 3 ನಗರಗಳಿಂದ ಸಾಕಷ್ಟು ಪ್ರತಿಭೆಗಳು ಬರುತ್ತಿವೆ. ನಮ್ಮ ಸಾಮರ್ಥ್ಯದ ಮೇಲೆ ನಮಗೆ ನಂಬಿಕೆ ಇರಬೇಕು. ನಾವು ಭಾರತವನ್ನು ಮೊದಲು ಎಂದು ಪರಿಗಣಿಸಬೇಕು. ಇದು ಅಖಂಡ ಭಾರತಕ್ಕೆ ದಾರಿ ಮಾಡಿಕೊಡುತ್ತದೆ. 

ನಾರಿ ಶಕ್ತಿಗೆ ಬೆಂಬಲ
ಭಾರತದ ಪ್ರಗತಿಗೆ ಸಮಾನತೆ ಆಧಾರವಾಗಿದೆ. ‘ಭಾರತ ಮೊದಲು’ ಎಂಬ ಮೂಲ ಮಂತ್ರದೊಂದಿಗೆ ನಾವು ಒಟ್ಟಾಗಿದ್ದೇವೆ ಎಂಬುದನ್ನು ಸಾಬೀತುಪಡಿಸಬೇಕಾಗಿದೆ.  ನಮ್ಮ ನಡವಳಿಕೆಯಲ್ಲಿ ಅಸ್ಪಷ್ಟತೆ ನುಸುಳಿದೆ ಮತ್ತು ನಾವು ಕೆಲವೊಮ್ಮೆ ಮಹಿಳೆಯರನ್ನು ಅವಮಾನಿಸುತ್ತೇವೆ. ಇದನ್ನು ನಮ್ಮ ನಡವಳಿಕೆಯಿಂದಲೇ ಕಿತ್ತುಹಾಕುವ ಪ್ರತಿಜ್ಞೆ ಮಾಡಬಹುದೇ? ಮಹಿಳೆಯರನ್ನು ಗೌರವಿಸುವುದು ಭಾರತದ ಬೆಳವಣಿಗೆಯ ಆಧಾರವಾಗಿದೆ. ನಾವು ನಮ್ಮ 'ನಾರಿ ಶಕ್ತಿ'ಗೆ ಬೆಂಬಲ ನೀಡಬೇಕಾಗಿದೆ. ಆತ್ಮನಿರ್ಭರ ಭಾರತ'ಕ್ಕೆ ಒತ್ತು ನೀಡಿದ ಪ್ರಧಾನಮಂತ್ರಿ, ಈ ಕಲ್ಪನೆಯನ್ನು 'ಜನಾಂದೋಲನ’ದಂತೆ ಮುಂದುವರಿಸಿಕೊಂಡು ಹೋಗುವ ಅಗತ್ಯ ಪ್ರತಿಪಾದಿಸಿದ್ದಾರೆ. 

‘ದೇಶದ ಅಭಿವೃದ್ಧಿಗೆ 25 ವರ್ಷ ಮುಡಿಪಿಡಿ’
ದೇಶದ ಅಭಿವೃದ್ಧಿಗಾಗಿ ಯುವಕರು ತಮ್ಮ ಜೀವನದ ಮುಂದಿನ 25 ವರ್ಷಗಳನ್ನು ಮುಡಿಪಾಗಿಡಬೇಕು ಎಂದು ನಾನು  ಒತ್ತಾಯಿಸುತ್ತೇನೆ. ನವೀಕರಿಸಬಹುದಾದ ಇಂಧನದಿಂದ ಹಿಡಿದು,  ವೈದ್ಯಕೀಯ ಶಿಕ್ಷಣಕ್ಕಾಗಿ ಉತ್ತಮ ಮೂಲಸೌಕರ್ಯಗಳವರೆಗೆ... ಭಾರತವು ಪ್ರತಿಯೊಂದು ರಂಗದಲ್ಲೂ ಸುಧಾರಣೆ ಸಾಧಿಸಿದೆ. ಕೆಲವೊಮ್ಮೆ ನಮ್ಮ ಪ್ರತಿಭೆ ಭಾಷೆಯ ಅಡೆತಡೆಗಳು ಎದುರಾಗುತ್ತವೆ. ಆದರೆ,  ನಮ್ಮ ದೇಶದ ಪ್ರತಿಯೊಂದು ಭಾಷೆಯ ಬಗ್ಗೆ ನಾವು ಹೆಮ್ಮೆಪಡಬೇಕು. ಪ್ರಕೃತಿಯು ಭಾರತದ ಪರಂಪರೆಯ ಪ್ರಮುಖ ಭಾಗವಾಗಿದೆ. ಹವಾಮಾನ ಬದಲಾವಣೆಯನ್ನು ಎದುರಿಸಲು ಸಹಾಯ ಮಾಡುವ ಸಂಪ್ರದಾಯಗಳು ಮತ್ತು ಆಚರಣೆಗಳನ್ನು ನಾವು ಈಗಾಗಲೇ ಹೊಂದಿದ್ದೇವೆ ಎಂದರು.

ಸೈನಿಕರಿಗೆ ದೊಡ್ಡ ಸೆಲ್ಯೂಟ್
ಆತ್ಮನಿರ್ಭರ್ ಭಾರತದ ಆಶಯವನ್ನು ನಮ್ಮ ಸೈನಿಕರು ಈಡೇರಿಸುತ್ತಿದ್ದಾರೆ. ಅವರಿಗೆ ದೊಡ್ಡ ಸವಾಲು. ಗಡಿಯಲ್ಲಿ ನಗುನಗುತ್ತಾ ಕಷ್ಟನಷ್ಟ ಅನುಭವಿಸುತ್ತಾ ದೇಶ ರಕ್ಷಿಸುವ ಸೈನಿಕರು ಸ್ವಾವಲಂಬನೆಯತ್ತ ದಿಟ್ಟತನದಿಂದ ಹೆಜ್ಜೆ ಹಾಕುತ್ತಿದ್ದಾರೆ. ಅವರಿಗೆಲ್ಲರಿಗೂ ನಾನು ಸೆಲ್ಯೂಟ್ ಮಾಡುತ್ತೇನೆ.  

ಕ್ರೀಡಾ ಸಾಧಕರಿಗೆ ಅಭಿನಂದನೆ
ಕ್ರೀಡಾಕ್ಷೇತ್ರದಲ್ಲಿ ಸುಧಾರಣೆ ತಂದಿದ್ದೇವೆ. ಪ್ರತಿಭೆಗೆ ಮನ್ನಣೆ ಕೊಡುವ ಪದ್ಧತಿ ಆರಂಭಿಸಿದ್ದೇವೆ. ಹೀಗಾಗಿಯೇ ಇಂದು ಭಾರತದ ಕ್ರೀಡಾಪಟುಗಳು ಹಲವು ಪದಕಗಳನ್ನು ಗೆದ್ದಿದ್ದಾರೆ. ವಿಶ್ವದ ಹಲವೆಡೆ ಭಾರತದ ಧ್ವಜ ಹಾರಿಸಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಇದೇ ರೀತಿ ಆಗಬೇಕಿದೆ.

ಮಾನವ ಸಂಪನ್ಮೂಲದ ಸಮರ್ಥ ಬಳಕೆ ಆಗಲಿ
ಭಾರತದ ಆರ್ಥಿಕ ಪ್ರಗತಿಯು ಎಲ್ಲರ ಕೊಡುಗೆ ಬಯಸುತ್ತದೆ. ಸಣ್ಣ ರೈತರು, ಸಣ್ಣ ಉದ್ಯಮಿಗಳು, ಆಟೊರಿಕ್ಷಾ ಓಡಿಸುವವರು, ಬಸ್ ಚಾಲಕರು ಸೇರಿದಂತೆ ಎಲ್ಲರೂ ಆರ್ಥಿಕವಾಗಿ ಸಬಲರಾಗಬೇಕು. ಕಳೆದ 75 ವರ್ಷಗಳಲ್ಲಿ ಹಲವು ಸಿದ್ಧಿ ಪಡೆದಿದ್ದೇವೆ. ಹೊಸ ಕನಸು ಕಂಡಿದ್ದೇವೆ, ಹೊಸ ಸಿದ್ಧಿ ಸಾಧಿಸಿದ್ದೇವೆ. ಮಾನವ ಸಂಪನ್ಮೂಲ ಮತ್ತು ಪ್ರಕೃತಿ ಸಂಪನ್ಮೂಲವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಜನ ಕಲ್ಯಾಣದಿಂದ ಜಗ ಕಲ್ಯಾಣ ಎನ್ನುವುದು ನಮ್ಮ ಪರಂಪರೆ. ಇದು ನಮ್ಮ ಪ್ರಾಣಶಕ್ತಿ. ನಮ್ಮ ಮುಂದಿನ 25 ವರ್ಷಗಳಲ್ಲಿ ಕನಸುಗಳು ಈಡೇರಲು ಈ ಸಂಕಲ್ಪ ಅನಿವಾರ್ಯ. ಪ್ರಕೃತಿಯನ್ನು ಪೂಜಿಸುವ ನಮ್ಮ ದೇಶದ ಪರಂಪರೆಯು ಇಂದಿನ ಹವಾಮಾನ ವೈಪರಿತ್ಯಕ್ಕೆ ಉತ್ತರವಾಗಿದೆ. ಪ್ರಕೃತಿಯೊಂದಿಗೆ ಹೊಂದಿಕೊಂಡು ಬದುಕುವವರು ನಾವು ಎಂದರು.

ವಂದೇ ಮಾತರಂ ಘೋಷಣೆಯೊಂದಿಗೆ ಭಾಷಣ ಪೂರ್ಣಗೊಳಿಸಿದ ಪ್ರಧಾನಿ ಮೋದಿ
ಈ ಅಮೃತ ಕಾಲದಲ್ಲಿ ಎಲ್ಲರ ಪ್ರಯತ್ನ ಅತ್ಯಗತ್ಯ. ಟೀಂ ಇಂಡಿಯಾ ಭಾವನೆಯಿಂದ ನಾವು 130 ಕೋಟಿ ಜನರು ಮುಂದೆ ಹೆಜ್ಜೆ ಇಡಬೇಕು. ನನ್ನೊಂದಿಗೆ ಎಲ್ಲರೂ ಹೇಳಿ... ಜೈ ಹಿಂದ್, ಭಾರತ್ ಮಾತಾ ಕಿ ಜೈ, ವಂದೇ ಮಾತರಂ ಘೋಷಣೆಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾಷಣ ಪೂರ್ಣಗೊಳಿಸಿದರು. ನಂತರ ರಾಷ್ಟ್ರಗೀತೆ ಮೊಳಗಿತು.


Stay up to date on all the latest ದೇಶ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp