social_icon

Independence Day: ಟೆಲಿಪ್ರಾಂಪ್ಟರ್ ಬಿಟ್ಟು ಕಾಗದ ಬಳಸಿ ಭಾಷಣ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ  ಬಳಕೆ ಮಾಡಿದ್ದಾರೆ.

Published: 15th August 2022 02:24 PM  |   Last Updated: 15th August 2022 02:24 PM   |  A+A-


PM Modi ditches teleprompter for I-Day speech

ಪ್ರಧಾನಿ ಮೋದಿ

Posted By : srinivasamurthy
Source : PTI

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಿಂದ ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡುವಾಗ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳ  ಬಳಕೆ ಮಾಡಿದ್ದಾರೆ.

ಹೌದು.. ಪ್ರಧಾನಿ ಭಾಷಣದಲ್ಲಿ ಇಂದು ಒಂದು ವ್ಯತ್ಯಾಸ ಮುಖ್ಯವಾಗಿ ಎದ್ದು ಕಂಡಿದ್ದು, ಮೋದಿ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳಲ್ಲಿ ಬರೆದಿದ್ದ ಅಂಶಗಳನ್ನು ಆಧರಿಸಿ ಅವರು ಭಾಷಣ ಮಾಡಿದರು. ಈ ಹಿಂದಿನ ಭಾಷಣಗಳಲ್ಲಿ ಮೋದಿ ಅವರು ಟೆಲಿಪ್ರಾಂಪ್ಟರ್ ಬಳಕೆ ಮಾಡುತ್ತಿದ್ದರು. ನೋಡುವವರಿಗೆ ಅವರು ನೇರವಾಗಿ ತಮ್ಮನ್ನೇ ನೋಡುತ್ತಾ ಮಾತನಾಡುತ್ತಿದ್ದಾರೆ ಎನಿಸುವಂತೆ ಇರುತ್ತಿತ್ತು. ಆದರೆ ಈ ಬಾರಿ ಅವರು ಆಗಾಗ ಕಾಗದದ ಚೀಟಿಗಳನ್ನು ನೋಡುತ್ತಾ, ಭಾಷಣ ಮುಂದುವರಿಸಿದರು.

ಇದನ್ನೂ ಓದಿ: 'ಭ್ರಷ್ಟಾಚಾರ, ವಂಶ ಆಳ್ವಿಕೆ ಭಾರತದ 2 ದೊಡ್ಡ ಸವಾಲುಗಳು': ಸ್ವಾತಂತ್ರ್ಯೋತ್ಸವ ಭಾಷಣದಲ್ಲೂ ಕಾಂಗ್ರೆಸ್ ಗೆ ತಿವಿದ ಪ್ರಧಾನಿ ಮೋದಿ

ಆಜಾದಿ ಕಾ ಅಮೃತ್ ಮಹೋತ್ಸವದ ಬ್ಯಾನರ್ ಅಡಿಯಲ್ಲಿ ದೇಶದಲ್ಲಿ ಆಚರಿಸಲಾಗುತ್ತಿರುವ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ ಟೆಲಿಪ್ರಾಂಪ್ಟರ್ ಅನ್ನು ಪಕ್ಕಕ್ಕೆ ಹಾಕಲಾಯಿತು. 

ಗಮನ ಸೆಳೆದ ಮೋದಿ ವಸ್ತ್ರ
ರಾಷ್ಟ್ರೀಯ ಧ್ವಜದ ಚಿತ್ರವಿರುವ ಪೇಟ, ಬಿಳಿ ಜುಬ್ಬಾ- ಪೈಜಾಮದ ಮೇಲೆ ನೀತಿ ಬಣ್ಣದ ನೆಹರೂ ಜಾಕೆಟ್ ತೊಟ್ಟು ಮೋದಿ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಮೋದಿಯವರ ಬಿಳಿ ಕುರ್ತಾ ಮತ್ತು ನೀಲಿ ಜಾಕೆಟ್‌ ಹಾಗೂ ಅದಕ್ಕೊಪ್ಪುವ ವಿಶೇಷ ವಿನ್ಯಾಸದ ಪೇಟ ಗಮನ ಸೆಳೆಯಿತು. ಸ್ವಾತಂತ್ರ್ಯ ದಿನಾಚರಣೆಯ ಭಾಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿಶಿಷ್ಟ ಉಡುಪುಗಳು ಯಾವಾಗಲೂ ರಾಷ್ಟ್ರದ ಗಮನವನ್ನು ಸೆಳೆಯುತ್ತವೆ.

ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನದಿಂದ ಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ತ್ರಿವರ್ಣ ಧ್ವಜ ಹಾರಾಡುತ್ತಿದೆ: ಪ್ರಧಾನಿ ಮೋದಿ

ಈ ವರ್ಷ ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿ ಸಾಂಪ್ರದಾಯಿಕ ಕುರ್ತಾ ಮತ್ತು ನೀಲಿ ಜಾಕೆಟ್ ಮತ್ತು ಪೇಟವನ್ನು ಧರಿಸಿದ್ದರು. ಐತಿಹಾಸಿಕ ಕೆಂಪು ಕೋಟೆಯ ಮೇಲೆ ಮೋದಿ ‘ತಿರಂಗ’ ಧ್ವಜವನ್ನು ಹಾರಿಸಿದರು. ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಅವರನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಮತ್ತು ರಕ್ಷಣಾ ಕಾರ್ಯದರ್ಶಿ ಸ್ವಾಗತಿಸಿದರು.


Stay up to date on all the latest ದೇಶ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp