ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ; ಗ್ರೆನೇಡ್ ತೂರಿದ ಉಗ್ರರು- ಒರ್ವ ಪೊಲೀಸ್ ಸಿಬ್ಬಂದಿಗೆ ಗಾಯ 

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. 
ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ (ಸಂಗ್ರಹ ಚಿತ್ರ)
ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಭಯೋತ್ಪಾದಕರ ದಾಳಿ (ಸಂಗ್ರಹ ಚಿತ್ರ)

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದಿದ್ದು, ಶ್ರೀನಗರದಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. 

ಒಂದು ಗಂಟೆಯ ಅವಧಿಯಲ್ಲಿ ಸತತ ಎರಡು ಗ್ರೆನೇಡ್ ದಾಳಿ ನಡೆದಿದ್ದು, ಓರ್ವ ಪೋಲೀಸ್ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮತ್ತೊಂದು ದಾಳಿಯಲ್ಲಿ ಭಯೋತ್ಪಾದಕರು ಬದ್ಗಾಮ್ ನ ಗೋಪಾಲ್ ಪೋರ ಚದೂರ ಪ್ರದೇಶದಲ್ಲಿ ಗ್ರೆನೇಡ್ ದಾಳಿ ನಡೆದಿದ್ದು, ಕರಣ್ ಕುಮಾರ್ ಸಿಂಗ್ ಎಂಬ ಓರ್ವ ಜನಸಾಮಾನ್ಯ ತೀವ್ರವಾಗಿ ಗಾಯಗೊಂಡಿದ್ದಾರೆ. 

ಗಾಯಗೊಂಡ ವ್ಯಕ್ತಿಯನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಿದ್ದು, ಆತನ ಆರೋಗ್ಯ ಸ್ಥಿತಿ ಸ್ಥಿರವಾಗಿದೆ, ಪ್ರದೇಶವನ್ನು ಪೊಲೀಸರು ಸುತ್ತುವರೆದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com