ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 4ನೇ ವರ್ಷದ ಪುಣ್ಯತಿಥಿ: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನಿ ಸೇರಿ ಗಣ್ಯರಿಂದ ಗೌರವ ನಮನ

ಇಂದು ಆಗಸ್ಟ್ 16 ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. 
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ ಅಂಗವಾಗಿ ಗಣ್ಯರಿಂದ ದೆಹಲಿಯ ಸದೈವ ಅಟಲ್ ಸ್ಮಾರಕದಲ್ಲಿ ಗೌರವ ನಮನ
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ ಅಂಗವಾಗಿ ಗಣ್ಯರಿಂದ ದೆಹಲಿಯ ಸದೈವ ಅಟಲ್ ಸ್ಮಾರಕದಲ್ಲಿ ಗೌರವ ನಮನ

ನವದೆಹಲಿ: ಇಂದು ಆಗಸ್ಟ್ 16 ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ 4ನೇ ವರ್ಷದ ಪುಣ್ಯತಿಥಿ. 

ಅದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪ ರಾಷ್ಟ್ರಪತಿ ಜಗದೀಪ್ ಧನ್ ಕರ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಅಟಲ್ ಬಿಹಾರಿ ವಾಜಪೇಯಿಯವರ ಸಾಕುಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ, ಲೋಕಸಭಾಧ್ಯಕ್ಷ ಓಂ ಬಿರ್ಲಾ ಸೇರಿದಂತೆ ಬಿಜೆಪಿ ನಾಯಕರು ದೆಹಲಿಯ ಸದೈವ ಅಟಲ್ ಸ್ಮಾರಕ ಕೇಂದ್ರಕ್ಕೆ ತೆರಳಿ ಗೌರವ ನಮನ ಸಲ್ಲಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ  ಹೊಸ ರೂಪ ಕೊಟ್ಟ ಅಟಲ್ ಬಿಹಾರಿ ವಾಜಪೇಯಿ ಅವರನ್ನು ರಾಜಕೀಯವಾಗಿ ವಿರೋಧ ಪಕ್ಷ ನಾಯಕರು ವಿರೋಧಿಸುತ್ತಿದ್ದರೇ ಹೊರತು ವೈಯಕ್ತಿಕವಾಗಿ ಅವರ ಬಗ್ಗೆ ಎಲ್ಲಾ ಪಕ್ಷಗಳ ನಾಯಕರು ಗೌರವಯುತವಾಗಿ ಇಂದಿಗೂ ಮಾತನಾಡುತ್ತಾರೆ. ಅಜಾತಶತ್ರು ಎಂದೇ ವಾಜಪೇಯಿ ಬದುಕಿದ್ದಾಗಲೂ ಕರೆಸಿಕೊಳ್ಳುತ್ತಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com