'ಸಾಂಸ್ಥಿಕ ಚುನಾವಣೆ ಕೊರತೆ': ಬಿಜೆಪಿ ಸಂಸದೀಯ ಮಂಡಳಿ ಪುನರ್ ರಚನೆ ವಿರುದ್ಧ ಸುಬ್ರಮಣಿಯನ್ ಸ್ವಾಮಿ ವಾಗ್ದಾಳಿ

ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ "ಕೊರತೆ" ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿ ತನ್ನ ಸಂಸದೀಯ ಮಂಡಳಿಯನ್ನು ಪುನರ್ ರಚಿಸಿದ ಮಾರನೇ ದಿನ ಪಕ್ಷದ ಮಾಜಿ ಸಂಸದ ಸುಬ್ರಮಣಿಯನ್ ಸ್ವಾಮಿ, ಪದಾಧಿಕಾರಿಗಳ ನೇಮಕದಲ್ಲಿ ಸಾಂಸ್ಥಿಕ ಚುನಾವಣೆಯ "ಕೊರತೆ" ಇದೆ ಎಂದು ಪಕ್ಷದ ನಾಯಕತ್ವವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಪ್ರತಿಯೊಂದು ಹುದ್ದೆಗೂ ಪ್ರಧಾನಿ ನರೇಂದ್ರ ಮೋದಿಯವರ ಅನುಮೋದನೆ ಪಡೆದು ನಾಯಕರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಆರೋಪಿಸಿದ್ದಾರೆ.

"ಜನತಾ ಪಕ್ಷ ಮತ್ತು ನಂತರ ಬಿಜೆಪಿಯ ಆರಂಭಿಕ ದಿನಗಳಲ್ಲಿ, ಪದಾಧಿಕಾರಿಗಳನ್ನು ನೇಮಕ ಮಾಡಲು ನಾವು ಪಕ್ಷ ಮತ್ತು ಸಂಸದೀಯ ಪಕ್ಷದ ಚುನಾವಣೆಗಳನ್ನು ನಡೆಸುತ್ತಿದ್ದೇವೆ. ಪಕ್ಷದ ಸಂವಿಧಾನಕ್ಕೆ ಇದರ ಅಗತ್ಯವಿದೆ. ಇಂದು ಬಿಜೆಪಿಯಲ್ಲಿ ಯಾವುದೇ ಚುನಾವಣೆಗಳಿಲ್ಲ. ಪ್ರತಿ ಹುದ್ದೆಗೆ ಮೋದಿ ಅನುಮೋದನೆಯೊಂದಿಗೆ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗುತ್ತಿದೆ” ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಆದಾಗ್ಯೂ, ಯಾವಾಗಲೂ ಪಕ್ಷದ ಅಧ್ಯಕ್ಷರು, ಪಕ್ಷದ ಸದಸ್ಯರನ್ನು ವಿವಿಧ ಸ್ಥಾನಗಳಿಗೆ ನಾಮನಿರ್ದೇಶನ ಮಾಡುತ್ತಾರೆ. ನಂತರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಅಥವಾ ಇತರ ಸೂಕ್ತ ಸಂಸ್ಥೆಗಳು ಆ ನೇಮಕಾತಿಗಳನ್ನು ಅನುಮೋದಿಸುತ್ತವೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಹಲವಾರು ವಿಷಯಗಳಲ್ಲಿ ಮೋದಿ ಸರ್ಕಾರದ ವಿರುದ್ಧ ಸದಾ ಟೀಕೆ ಮಾಡುವ ಸುಬ್ರಮಣಿಯನ್ ಸ್ವಾಮಿ ಅವರು ಗುರುವಾರ ಕೋಲ್ಕತ್ತಾದಲ್ಲಿ ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com