ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ಕಲ್ಲು ತೂರಾಟ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ  ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ  ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.
ಬೆಂಗಾವಲು ವಾಹನದ ಗಾಜುಗಳಿಗೆ ಹಾನಿ
ಬೆಂಗಾವಲು ವಾಹನದ ಗಾಜುಗಳಿಗೆ ಹಾನಿ

ಪಾಟ್ನಾ:  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ  ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ  ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

ದಾಳಿಯಲ್ಲಿ ಬೆಂಗಾವಲು ವಾಹನದ ಕಾರಿನ  ಗಾಜುಗಳಿಗೆ ಹಾನಿಯಾಗಿದೆ. ಇತ್ತೀಚಿಗೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ
ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿ  'ಮಹಾಘಟಬಂಧನ್' -02  ಸರ್ಕಾರ ರಚನೆಯಾಗಿತ್ತು. 

ಬಿಜೆಪಿ ಜೊತೆಗಿನ ಧೀರ್ಘ ಸಂಬಂಧವನ್ನು ಕಡಿದುಕೊಂಡು ಆರ್ ಜೆಡಿ ನೇತೃತ್ವದ ವಿಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com