ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ದಾಳಿ, ಕಲ್ಲು ತೂರಾಟ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ  ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ  ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.
ಬೆಂಗಾವಲು ವಾಹನದ ಗಾಜುಗಳಿಗೆ ಹಾನಿ
ಬೆಂಗಾವಲು ವಾಹನದ ಗಾಜುಗಳಿಗೆ ಹಾನಿ
Updated on

ಪಾಟ್ನಾ:  ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬೆಂಗಾವಲು ವಾಹನದ ಮೇಲೆ  ಭಾನುವಾರ ಕಲ್ಲು ತೂರಾಟ ನಡೆದಿದೆ. ಪಾಟ್ನಾದಲ್ಲಿ ನಡೆದ ಈ  ಘಟನೆ ವೇಳೆ ಬೆಂಗಾವಲು ವಾಹನ ಪಡೆಯಲ್ಲಿ ನಿತೀಶ್ ಕುಮಾರ್ ಇರಲಿಲ್ಲ ಎಂದು ತಿಳಿದುಬಂದಿದೆ.

ದಾಳಿಯಲ್ಲಿ ಬೆಂಗಾವಲು ವಾಹನದ ಕಾರಿನ  ಗಾಜುಗಳಿಗೆ ಹಾನಿಯಾಗಿದೆ. ಇತ್ತೀಚಿಗೆ ನಡೆದ ರಾಜಕೀಯ ಬೆಳವಣಿಗೆಯಲ್ಲಿ
ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿ  'ಮಹಾಘಟಬಂಧನ್' -02  ಸರ್ಕಾರ ರಚನೆಯಾಗಿತ್ತು. 

ಬಿಜೆಪಿ ಜೊತೆಗಿನ ಧೀರ್ಘ ಸಂಬಂಧವನ್ನು ಕಡಿದುಕೊಂಡು ಆರ್ ಜೆಡಿ ನೇತೃತ್ವದ ವಿಪಕ್ಷಗಳ ಬೆಂಬಲದೊಂದಿಗೆ ನಿತೀಶ್ ಕುಮಾರ್ ಎಂಟನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ, ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com