ನವದೆಹಲಿ: ಗುಲಾಂ ನಬಿ ಆಜಾದ್ ಅವರ ಡಿಎನ್ಎ "ಮೋದಿ-ಫೈಡ್" ಆಗಿದೆ ಎಂದು ಕಾಂಗ್ರೆಸ್ ತೊರೆದ ನಂತರ ಪಕ್ಷದ ನಾಯಕತ್ವದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಗುಲಾಂ ನಬಿ ಆಜಾದ್ ಅವರಿಗೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ತಿರುಗೇಟು ನೀಡಿದ್ದಾರೆ.
ತಮ್ಮ ರಾಜ್ಯಸಭಾ ಅಧಿಕಾರಾವಧಿಯ ಅಂತ್ಯಕ್ಕೆ ಪಕ್ಷಕ್ಕೆ ರಾಜೀನಾಮೆ ನೀಡಿ ದ್ರೋಹ ಬಗೆದಿರುವುದು ಅವರ ನಿಜವಾದ ವ್ಯಕ್ತಿತ್ವವನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಟ್ವೀಟ್ ಮಾಡಿದ್ದಾರೆ.
"ಕಾಂಗ್ರೆಸ್ ನಾಯಕತ್ವದಿಂದ ಅತ್ಯಂತ ಗೌರವದಿಂದ ನಡೆಸಿಕೊಳ್ಳಲ್ಪಟ್ಟ ವ್ಯಕ್ತಿಯೊಬ್ಬರು ತಮ್ಮ ಕೆಟ್ಟ ವೈಯಕ್ತಿಕ ದಾಳಿಯಿಂದ ದ್ರೋಹ ಬಗೆದಿದ್ದಾರೆ. ಇದು ಅವರ ನೈಜ ಸ್ವರೂಪವನ್ನು ಬಹಿರಂಗಪಡಿಸುತ್ತದೆ. ಗುಲಾಂ ನಬಿ ಆಜಾದ್ ಡಿಎನ್ಎ ಮೋದಿ-ಫೈಡ್ ಆಗಿದೆ" ಎಂದು ಜೈರಾಮ್ ರಮೇಶ್ ಗೇಲಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಮಾಧ್ಯಮ ವಿಭಾಗದ ಮುಖ್ಯಸ್ಥ ಪವನ್ ಖೇರಾ ಅವರು ಸಹ ಆಜಾದ್ ವಿರುದ್ಧ ವಾಗ್ದಾಳಿ ನಡೆಸಿದ್ದು, ನಿಮ್ಮ ರಾಜ್ಯಸಭೆಯ ಅವಧಿ ಮುಗಿದ ತಕ್ಷಣ ನೀವು ವಿಚಲಿತರಾಗಿದ್ದೀರಿ. ನೀವು ಒಂದು ಸೆಕೆಂಡ್ ಕೂಡ ಅಧಿಕಾರ ಇಲ್ಲದೆ ಇರಲು ಸಾಧ್ಯವಿಲ್ಲ” ಎಂದು ಹೇಳಿದರು.
Advertisement