ಶಾಲಾ ಶಿಕ್ಷಕರ ನೇಮಕಾತಿ ಹಗರಣ: ಪಾರ್ಥ ಚಟರ್ಜಿ, ಅರ್ಪಿತಾ ಮುಖರ್ಜಿ ನ್ಯಾಯಾಂಗ ಬಂಧನ ವಿಸ್ತರಣೆ

ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ
ಪಾರ್ಥ ಚಟರ್ಜಿ ಮತ್ತು ಅರ್ಪಿತಾ ಮುಖರ್ಜಿ

ಕೋಲ್ಕತಾ: ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿತರಾಗಿರುವ ತೃಣಮೂಲಕ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.

ಶಾಲಾ ಸೇವಾ ಆಯೋಗದ ನೇಮಕಾತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ನ್ಯಾಯಾಂಗ ಬಂಧನವನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯವು ಬುಧವಾರ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.

ಕೋಲ್ಕತ್ತಾದ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ನ್ಯಾಯಾಲಯವು ಈ ಹಿಂದೆ ಆಗಸ್ಟ್ 31 ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತ್ತು. ಇದೀಗ ಮತ್ತೆ ಸೆಪ್ಟೆಂಬರ್ 14 ರವರೆಗೆ ವಿಸ್ತರಿಸಿದೆ.

ಏನಿದು ಪ್ರಕರಣ?
ಪಾರ್ಥ ಚಟರ್ಜಿ ಮತ್ತುು ಅರ್ಪಿತಾ ಮುಖರ್ಜಿ ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಅಕ್ರಮ ನೇಮಕಾತಿಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಜುಲೈ 23 ರಂದು ಬಂಧನಕ್ಕೊಳಗಾಗಿದ್ದರು. ಪಾರ್ಥ ಚಟರ್ಜಿ ಅವರ ಒಡೆತನದ ಫ್ಲಾಟ್ ಗಳಿಂದ 49.8 ಕೋಟಿ ರೂ. ನಗದು, ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿಗಳ ದಾಖಲೆಗಳು ಮತ್ತಿಬ್ಬರು ಆರೋಪಿಗಳು ಹೊಂದಿರುವ ಕಂಪನಿಯ ಜಂಟಿ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಇಡಿ ಹೇಳಿಕೊಂಡಿದೆ.

ಪಾರ್ಥ ಚಟರ್ಜಿ ಅವರನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಚಿವ ಸ್ಥಾನದಿಂದ ಕಿತ್ತೆಸೆದಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದಲ್ಲಿ ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಂದ ತೆರವು ಮಾಡಲಾಗಿದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com