ಬಲ್ಲಿಯಾ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಬಂಧಿತನನ್ನು ನರ್ಹಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಟ್ ಮಜಾರಿಯಾ ಗ್ರಾಮದ ನಿವಾಸಿ ಸುರೇಂದ್ರ ಯಾದವ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಯಾದವ್ ಅವರು ಸೋಮವಾರ ಟ್ವಿಟರ್ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಟೀಕೆಗಳನ್ನು ಪೋಸ್ಟ್ ಮಾಡಿದ್ದರು. ಈ ಸಂಬಂಧ ಅಖಿಲ ಭಾರತ ಕ್ಷತ್ರಿಯ ಮಂಚ್ ಉಸ್ತುವಾರಿ ಬ್ರಿಜೇಶ್ ಸಿಂಗ್ ಅವರು ಮಂಗಳವಾರ ದೂರು ದಾಖಲಿಸಿದ್ದಾರೆ ಎಂದು ನರ್ಹಿ ಪೊಲೀಸ್ ಠಾಣೆ ಉಸ್ತುವಾರಿ ಪನ್ನೆ ಲಾಲ್ ತಿಳಿಸಿದ್ದಾರೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಐಟಿ ಕಾಯ್ದೆಯ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ಲಾಲ್ ಹೇಳಿದ್ದಾರೆ.
Advertisement