ಗುಜರಾತ್: ಮತ್ತೆ ಹಸುಗೆ ಡಿಕ್ಕಿ ಹೊಡೆದ ವಂದೇ ಭಾರತ್ ಎಕ್ಸ್ ಪ್ರೆಸ್!

ಗಾಂಧಿನಗರ-ಮುಂಬೈ ವಂದೇ ಭಾರತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತೊಮ್ಮೆ ಹಸುವಿಗೆ ಡಿಕ್ಕಿ ಹೊಡೆದಿದೆ.
ಜಾನುವಾರಿಗೆ ಡಿಕ್ಕಿ ಹೊಡೆದು ಹಾನಿಗೀಡಾದ ವಂದೇ ಭಾರತ್ ಎಕ್ಸ್ ಪ್ರೆಸ್
ಜಾನುವಾರಿಗೆ ಡಿಕ್ಕಿ ಹೊಡೆದು ಹಾನಿಗೀಡಾದ ವಂದೇ ಭಾರತ್ ಎಕ್ಸ್ ಪ್ರೆಸ್

ನವದೆಹಲಿ: ಗಾಂಧಿನಗರ-ಮುಂಬೈ ವಂದೇ ಭಾರತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ಮತ್ತೊಮ್ಮೆ ಹಸುವಿಗೆ ಡಿಕ್ಕಿ ಹೊಡೆದಿದೆ. ಉದ್ವಾದ ಮತ್ತು ವಾಪಿ ಸ್ಟೇಷನ್ ಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

ಹಸುವಿಗೆ ರಲು ಡಿಕ್ಕಿ ಹೊಡೆದಿದ್ದರ ಪರಿಣಾಮವಾಗಿ ರೈಲಿನ ಮುಂಭಾಗಕ್ಕೆ ಸಣ್ಣಪುಟ್ಟ ಹಾನಿ ಉಂಟಾಗಿದೆ. ಸೆಮಿ ಹೈ ಸ್ಪೀಡ್ ರೈಲು ಈ ಭಾಗದಲ್ಲಿ ಸಂಚರಿಸಲು ಆರಂಭವಾದಾಗಿನಿಂದಲೂ ಈ ರೀತಿ ಪ್ರಾಣಿಗಳಿಗೆ ಢಿಕ್ಕಿ ಹೊಡೆದಿರುವ ನಾಲ್ಕನೇ ಘಟನೆ ಇದಾಗಿದೆ.

ವೆಸ್ಟ್ರನ್ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುಮಿತ್ ಠಾಕೂರ್ ಈ ಬಗ್ಗೆ ಮಾತನಾಡಿದ್ದು, ಲೆವೆಲ್ ಕ್ರಾಸಿಂಗ್ ಗೇಟ್ ನಂ.87 ರಲ್ಲಿ ಸಂಜೆ 6.23 ಕ್ಕೆ ಈ ಘಟನೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ರೈಲಿನ ಕಾರ್ಯಾಚರಣೆಗೆ ಈ ಘಟನೆಯಿಂದ ಯಾವುದೇ ಹಾನಿ ಉಂಟಾಗಿಲ್ಲ. ರಾತ್ರಿಯೇ ಈ ರೈಲಿನ ಹಾನಿಯನ್ನು ಸರಿಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಘಟನೆ ನಡೆದ ಕೆಲಸ ಸಮಯ ರೈಲು ಸ್ಥಗಿತಗೊಂಡಿತ್ತು, ಬಳಿಕ ಮತ್ತೆ ಕಾರ್ಯಾರಂಭ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com