social_icon

ಡಿಸೆಂಬರ್ 7 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ

ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ

Published: 06th December 2022 01:48 PM  |   Last Updated: 06th December 2022 01:55 PM   |  A+A-


Parliament

ಸಂಸತ್ತು

PTI

ನವದೆಹಲಿ: ಸಂಸತ್‌ನ ಚಳಿಗಾಲದ ಅಧಿವೇಶನ ಇದೇ 7ರಿಂದ ಆರಂಭವಾಗಲಿದ್ದು, 16 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ಈ ಬಾರಿ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಒಟ್ಟು 16 ಹೊಸ ಮಸೂದೆಗಳು, ಟ್ರೇಡ್ ಮಾರ್ಕ್ (ತಿದ್ದುಪಡಿ) ಮಸೂದೆ, 2022, ಮತ್ತು ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಲಾಗುತ್ತದೆ.

ಕೆಲವು ಮಸೂದೆಗಳನ್ನು ಈಗಾಗಲೇ ಸದನಗಳಲ್ಲಿ ಅಂಗೀಕರಿಸಲಾಗಿದೆ ಅಥವಾ ಸಂಸದೀಯ ಸಮಿತಿಗಳು ಪರಿಶೀಲಿಸಿವೆ. ಚಳಿಗಾಲದ ಅಧಿವೇಶನವು ಡಿಸೆಂಬರ್ 29, 2022ರವರೆಗೆ ಇರಲಿದ್ದು, ಒಟ್ಟು 17 ಕೆಲಸದ ದಿನಗಳು ಇರುತ್ತವೆ.

ಇದರ ಮಧ್ಯೆ ದತ್ತಾಂಶ ಸಂರಕ್ಷಣಾ ಮಸೂದೆ ಮತ್ತು ಬ್ಯಾಂಕಿಂಗ್ ಕಾಯಿದೆ, ದಿವಾಳಿತನ ಕಾನೂನು ಮತ್ತು ಸ್ಪರ್ಧಾತ್ಮಕ ಆಯೋಗದ ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಗಳನ್ನು ಶಾಸಕಾಂಗ ವ್ಯವಹಾರ ಪಟ್ಟಿಯಲ್ಲಿ ಸೇರಿಸಲಾಗಿಲ್ಲ. ಸಂಸತ್ ಚಳಿಗಾಲ ಅಧಿವೇಶನದಲ್ಲಿ ಮಂಡನೆ ಆಗಲಿರುವ 16 ಮಸೂದೆಗಳು ಯಾವುವು ಹಾಗೂ ಚಳಿಗಾಲ ಅಧಿವೇಶನದ ಕುರಿತು ಪ್ರಮುಖ ಬೆಳವಣಿಗೆಗಳನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಚಳಿಗಾಲದ ಅಧಿವೇಶನದಲ್ಲಿ ಚರ್ಚಿಸಬಹುದಾದ ಶಾಸಕಾಂಗ ಕಾರ್ಯಸೂಚಿ ಮತ್ತು ಪ್ರಮುಖ ವಿಷಯಗಳ ಕುರಿತು ಚರ್ಚಿಸಲು ನರೇಂದ್ರ ಮೋದಿ ಸರ್ಕಾರ ಮಂಗಳವಾರ ನಾಯಕರ ಸರ್ವಪಕ್ಷ ಸಭೆಯನ್ನು ಕರೆದಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಇತ್ತೀಚೆಗೆ ಸರ್ವಪಕ್ಷ ಸಭೆಗೆ ಹಾಜರಾಗುವಂತೆ ವಿವಿಧ ಪಕ್ಷಗಳ ನಾಯಕರಿಗೆ ಆಹ್ವಾನಿಸಿದ್ದರು. ಸಂಸತ್‌ನ ಚಳಿಗಾಲದ ಅಧಿವೇಶನಕ್ಕೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಗೈರಾಗುವ ಸಾಧ್ಯತೆ ಇದೆ. ಸರ್ಕಾರ ಚರ್ಚೆಗೆ ಸಿದ್ಧವಾದರೆ, ಪಕ್ಷವು ಅದಕ್ಕೆ ರಚನಾತ್ಮಕ ಬೆಂಬಲವನ್ನು ನೀಡುತ್ತದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ ಹಿನ್ನಲೆ: ಚಳಿಗಾಲದ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು

ಇದಕ್ಕೆ ಪ್ರತ್ಯೇಕವಾಗಿ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಸಂಜೆ ಅಧಿವೇಶನಕ್ಕೆ ಮುಂಚಿತವಾಗಿ ವ್ಯವಹಾರ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಬಾರಿ ಅವರು ಅಧಿವೇಶನದ ಮುನ್ನಾದಿನದಂದು ವಾಡಿಕೆಯಂತೆ ಸರ್ವಪಕ್ಷ ಸಭೆಯ ಬದಲಿಗೆ ಬಿಎಸಿ ಸಭೆಯನ್ನು ಕರೆಯಲು ನಿರ್ಧರಿಸಿದ್ದಾರೆ. ಬಿಎಸಿ ಸದನದ ಶಾಸಕಾಂಗ ಕಾರ್ಯಸೂಚಿಯನ್ನು ಚರ್ಚಿಸುತ್ತದೆ. ಯಾವ ಪಕ್ಷಗಳು ಚರ್ಚೆಯನ್ನು ನಡೆಸಲು ಬಯಸುತ್ತವೆ ಎಂಬುದರ ಕುರಿತು ಚರ್ಚಿಸುತ್ತದೆ.

ಕಳೆದ 22 ತಿಂಗಳುಗಳಿಂದ ಭಾರತ ಮತ್ತು ಚೀನಾ ನಡುವೆ ಗಡಿ ಸಂಘರ್ಷ ನಡೆಯುತ್ತಿದ್ದು ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಈ ವಿಷಯವನ್ನು ಸಂಸತ್ತಿನಲ್ಲಿ ಚರ್ಚಿಸಬೇಕೆಂದು ಕಾಂಗ್ರೆಸ್ ಬಯಸುತ್ತಿದೆ


Stay up to date on all the latest ದೇಶ news
Poll
BJP_Casual_Images1

ವಿಧಾನಸಭೆ ಚುನಾವಣೆ: ಆಡಳಿತ ವಿರೋಧಿ ಅಲೆಯನ್ನು ಎದುರಿಸಿ ಬಿಜೆಪಿ ಕರ್ನಾಟಕದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲಿದೆಯೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp