social_icon

ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್‌ನಲ್ಲಿ ಮತ್ತೆ ಬಿಜೆಪಿ, ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ

ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ದಾಖಲೆಯ ಗೆಲವು ಸಾಧಿಸಿದೆ.

Published: 08th December 2022 08:20 PM  |   Last Updated: 08th December 2022 08:20 PM   |  A+A-


patel

ಭೂಪೇಂದ್ರ ಪಟೇಲ್

Posted By : lingaraj
Source : The New Indian Express

ಅಹಮದಾಬಾದ್/ಶಿಮ್ಲಾ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯದಲ್ಲಿ ಆಡಳಿತರೂಢ ಬಿಜೆಪಿ ದಾಖಲೆಯ ಗೆಲವು ಸಾಧಿಸಿದೆ.

1995 ರಿಂದ ಗುಜರಾತ್‌ನಲ್ಲಿ ಸತತ ಗೆಲುವು ಸಾಧಿಸುತ್ತಿರುವ ಭಾರತೀಯ ಜನತಾ ಪಕ್ಷ(ಬಿಜೆಪಿ), ಇಂದು ಸತತ ಏಳನೇ ಅವಧಿಗೆ ಅಧಿಕಾರಕ್ಕೇರುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ.

ಇದನ್ನು ಓದಿ: ಗುಜರಾತ್ ಸಿಎಂ ಆಗಿ ಭೂಪೇಂದ್ರ ಪಟೇಲ್ ಡಿಸೆಂಬರ್ 12ಕ್ಕೆ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ, ಶಾ ಭಾಗಿ

182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಈ ಹಿಂದಿನ ಕಾಂಗ್ರೆಸ್ ದಾಖಲೆಯನ್ನು ಧೂಳಿಪಟ ಮಾಡಿದೆ. 1985ರಲ್ಲಿ ಮಾಧವಸಿಂಹ ಸೋಲಂಕಿ ನೇತೃತ್ವದಲ್ಲಿ ಕಾಂಗ್ರೆಸ್‌ನ 149 ಸ್ಥಾನಗಳನ್ನು ಗೆಲ್ಲುವ ಮೂಲಕ ದಾಖಲೆ ಸೃಷ್ಟಿಸಿತ್ತು.

ಇದನ್ನು ಓದಿ: ಗುಜರಾತ್ ಜನಾದೇಶವನ್ನು ನಮ್ರತೆಯಿಂದ ಒಪ್ಪಿಕೊಳ್ಳುತ್ತೇವೆ: ರಾಹುಲ್ ಗಾಂಧಿ

ಗುಜರಾತ್​ನಲ್ಲಿ ಬಿಜೆಪಿಗೆ ಪ್ರಬಲ ಪ್ರತಿರೋಧ ಒಡ್ಡಬಹುದು ಎಂದು ನಿರೀಕ್ಷಿಸಿದ್ದ ಆಮ್ ಆದ್ಮಿ ಪಕ್ಷ ಕೇವಲ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಬಾರಿ ಪ್ರತಿಪಕ್ಷ ಕಾಂಗ್ರೆಸ್ ಕೇವಲ 17 ಸ್ಥಾನಗಳನ್ನು ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿದೆ.

ಇದನ್ನು ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ದು ಹೇಗೆ?: ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳು ಇವು....

ಇನ್ನು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಸ್ಪಷ್ಟ ಬಹುಮತ ಪಡೆದಿದ್ದು, ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ತನ್ನ ಶಾಸಕರಿಗೆ ಆಪರೇಷನ್ ಕಮಲದ ಗಾಳ ಹಾಕಬಹುದು ಎಂಬ ಕಾರಣಕ್ಕೆ ಎಲ್ಲ ಶಾಸಕರಿಗೂ ಚಂಡೀಗಢಕ್ಕೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ. 

ಹಿಮಾಚಲ ಪ್ರದೇಶದಲ್ಲಿ ಒಟ್ಟು 68 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಅಧಿಕಾರಕ್ಕೆ ಬರಲು ಯಾವುದೇ ಪಕ್ಷಕ್ಕೆ 35 ಸದಸ್ಯ ಬಲದ ಅಗತ್ಯವಿದೆ. ಕಾಂಗ್ರೆಸ್ 40, ಬಿಜೆಪಿ 25 ಸ್ಥಾನಗಳನ್ನು ಪಡೆದರೆ, ಮೂವರು ಪಕ್ಷೇತರರು ಗೆಲುವು ಸಾಧಿಸಿದ್ದಾರೆ.


Stay up to date on all the latest ದೇಶ news
Poll
Railways Minister Ashwini Vaishnaw waves at a goods train as train services resume

ಒಡಿಶಾದಲ್ಲಿ ಭೀಕರ ರೈಲು ಅಪಘಾತದ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವರು ರಾಜೀನಾಮೆ ನೀಡಬೇಕೇ?


Result
ಹೌದು
ಬೇಡ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp