ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ ಭೇಟಿ: ಅಂತರ್ ರಾಜ್ಯ ನದಿ ನೀರು ಹಂಚಿಕೆ ಸೇರಿ ಹಲವು ವಿಚಾರಗಳ ಚರ್ಚೆ

ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.
ಹೆಚ್. ಡಿ. ದೇವೇಗೌಡ
ಹೆಚ್. ಡಿ. ದೇವೇಗೌಡ

ನವದೆಹಲಿ:  ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿರುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

<strong>ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ</strong>
ಪ್ರಧಾನಿ ಮೋದಿ, ಹೆಚ್.ಡಿ. ದೇವೇಗೌಡ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಂದು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ, ಕಾವೇರಿ, ಕೃಷ್ಣ, ಮಹದಾಯಿ ಅಂತರ್ ರಾಜ್ಯ ನದಿ ನೀರಿನ ಹಂಚಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಮಾತುಕತೆ ನಡೆಸಲಾಗಿದೆ ಎಂದರು.

ಹಾಸನ ವಿಮಾನ ನಿಲ್ದಾಣ ಯೋಜನೆಯನ್ನು ತ್ವರಿತಗತಿಯಲ್ಲಿ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಕುಂಚಿಟಿಗ ಒಕ್ಕಲಿಗ ಸಮುದಾಯವನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸುವಂತೆಯೂ ಪ್ರಧಾನಿಗೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು. 

ತಾವು ಪ್ರಸ್ತಾಪಿಸಿರುವ ಎಲ್ಲಾ ವಿಷಯಗಳನ್ನು ಪ್ರಧಾನಿ ಗಂಭೀರವಾಗಿ ಪರಿಗಣಿಸಿದ್ದಾರೆ. ಎಲ್ಲಾ ದಾಖಲೆಗಳನ್ನು ಅವರು ಪರಿಶೀಲಿಸಿದ್ದು, ಖಂಡಿತವಾಗಿಯೂ ಪರಿಗಣಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ದೇವೇಗೌಡ ಮಾಹಿತಿ ನೀಡಿದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com