ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸುವ ವೇಳೆ ವಿದ್ಯುತ್ ಸ್ಪರ್ಶ: ನಾಲ್ವರ ಸಾವು!

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಅಣೆಕಟ್ಟಿನ ಹಿನ್ನೀರಿನಲ್ಲಿ ನೀರಿನ ಪಂಪ್ ಮೋಟಾರ್ ಇರಿಸಲು ಪ್ರಯತ್ನಿಸುತ್ತಿದ್ದಾಗ ವಿದ್ಯುತ್ ಸ್ಪರ್ಶದಿಂದ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋರ್ ತಹಸಿಲ್‌ನ ನಿಗ್ಡೆ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಂಜವಾನಿ ಅಣೆಕಟ್ಟು ಹಿನ್ನೀರಿನಲ್ಲಿ ನಾಲ್ವರ ತಂಡ ಮೋಟಾರ್ ಪಂಪ್ ಅನ್ನು ಇರಿಸಲು ಪ್ರಯತ್ನಿಸುತ್ತಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಅವರ ದೇಹಗಳನ್ನು ಹೊರತೆಗೆಯಲಾಗುತ್ತಿದೆ ಎಂದು ರಾಜ್‌ಗಡ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com