ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ನೆರೆ ಮನೆಯ ಮಹಿಳೆಯ ಹತ್ಯೆ!

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 
ಹತ್ಯೆ (ಸಾಂಕೇತಿಕ ಚಿತ್ರ)
ಹತ್ಯೆ (ಸಾಂಕೇತಿಕ ಚಿತ್ರ)

ಮುಂಬೈ: ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ವ್ಯಕ್ತಿಯೋರ್ವ ನೆರೆ ಮನೆಯ ಮಹಿಳೆಯನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. 

ಡೊಂಬಿವಿಲಿ ಪ್ರದೇಶದಲ್ಲಿ ಈ ಅಪರಾಧ ಕೃತ್ಯ ವರದಿಯಾಗಿದ್ದು,  ವೈಶಾಲಿ ಮಸೂದ್ ಸಂತ್ರಸ್ತ ಮಹಿಳೆಯಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾನ್ಪಾಡಾ ಪೊಲೀಸ್ ಠಾಣೆ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಅಂತರ್ಧರ್ಮೀಯ ವಿವಾಹ ಮಾಹಿತಿ ಸಂಗ್ರಹಕ್ಕೆ ಮಹಾರಾಷ್ಟ್ರ ಸರ್ಕಾರದಿಂದ ಸಮಿತಿ ರಚನೆ: ಶ್ರದ್ಧಾ ರೀತಿಯ ಪ್ರಕರಣಗಳ ತಡೆಗೆ ಈ ಕ್ರಮ ಎಂದ ಸರ್ಕಾರ
 
ಆರೋಪಿ ವೈಶಾಲಿ ಮಸೂದ್ ಅವರಿಂದ ಆಗಾಗ್ಗೆ ಹಣ ಪಡೆಯುತ್ತಿದ್ದ ಎಂದು ತಿಳಿದುಬಂದಿದೆ. ಆದರೆ ಬುಧವಾರ (ಡಿ.14 ರಂದು)  ವೈಶಾಲಿ ಹಣ ನೀಡಲು ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವ್ಯಕ್ತಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com