ಮುಂಬೈ: ತಾವು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವವರೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿಯಾಗಬೇಕು ಎಂದು ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಅವರು ಭಾನುವಾರ ಹೇಳಿದ್ದಾರೆ.
ಸದ್ಯ ಕ್ಯಾಬಿನೆಟ್ ಸಚಿವರಾಗಿರುವ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಚಂದ್ರಕಾಂತ್ ಪಾಟೀಲ್ ಅವರು ಫಡ್ನವಿಸ್ ಬದಲಿಗೆ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಪಕ್ಷ ಭಾರವಾದ ಹೃದಯದಿಂದ ನಿರ್ಧರಿಸಿದೆ ಎಂದು ಹೇಳಿದ ತಿಂಗಳುಗಳ ನಂತರ ಬವಾಂಕುಲೆ ಅವರು ಈ ಹೇಳಿಕೆ ನೀಡಿದ್ದಾರೆ.
ಬವಾಂಕುಲೆ ಅವರ ಈ ಹೇಳಿಕೆಯು ವಿರೋಧ ಪಕ್ಷಗಳ ಕೈಗೆ ಅಸ್ತ್ರ ನೀಡಿದ್ದು, ಪ್ರಸ್ತುತ ಸಿಎಂ ಏಕನಾಥ್ ಶಿಂಧೆಗೆ ಭಾರತೀಯ ಜನತಾ ಪಕ್ಷ ಯಾವುದೇ ಬೆಲೆ ನೀಡುತ್ತಿಲ್ಲ ಎಂಬುದನ್ನು ತೋರಿಸಿದೆ ಎಂದು ಎನ್ ಸಿಪಿ ಹೇಳಿದೆ.
ನಾಗ್ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಬವಾಂಕುಲೆ, "... ನಾನು ರಾಜ್ಯ ಘಟಕದ ಅಧ್ಯಕ್ಷ(ಬಿಜೆಪಿ) ಆಗಿರುವವರೆಗೂ ಫಡ್ನವಿಸ್ ಸಿಎಂ ಆಗಬೇಕು..." ಎಂದು ಹೇಳಿದ್ದಾರೆ.
Advertisement