ಸಂಸತ್ತಿನಲ್ಲಿ 'ನಾಯಿ' ವಿವಾದ ನಡುವೆ ಖರ್ಗೆ ಮತ್ತಿತರರೊಂದಿಗೆ ಸಿರಿಧಾನ್ಯ ಖಾದ್ಯ ಸವಿದ ಪ್ರಧಾನಿ ಮೋದಿ!
2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.
Published: 20th December 2022 06:09 PM | Last Updated: 20th December 2022 06:25 PM | A+A A-

ಭೋಜನಕೂಟದಲ್ಲಿ ಪ್ರಧಾನಿ ಮೋದಿ, ಮಲ್ಲಿಕಾರ್ಜುನ ಖರ್ಗೆ ಮತ್ತಿತರರು
ನವದೆಹಲಿ: 2023 ಸಿರಿ ಧಾನ್ಯ ವರ್ಷದ ಅಂಗವಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್ ಮಂಗಳವಾರ ಆಯೋಜಿಸಿದ್ದ ಭೋಜನಕೂಟದಲ್ಲಿ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮತ್ತಿತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಿರಿಧಾನ್ಯಗಳಿಂದ ಮಾಡಿದ ಆಹಾರವನ್ನು ಸವಿದರು.
ಮೋದಿ ಸುಮಾರು 40 ನಿಮಿಷಗಳ ಕಾಲ ಭೋಜನ ಕೂಟದಲ್ಲಿ ಪಾಲ್ಗೊಂಡರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆ ಸಭಾಪತಿ ಜಗದೀಪ್ ಧಂಕರ್ ಮತ್ತಿತರ ಸಂಸದರು ವಿಶೇಷವಾಗಿ ರಾಗಿ, ಸಜ್ಜೆ ಮತ್ತಿತರ ಸಿರಿಧಾನ್ಯಗಳಿಂದ ತಯಾರಿಸಲಾದ ವಿವಿಧ ಖಾದ್ಯಗಳ ರುಚಿಯನ್ನು ಆನಂದಿಸಿದರು.
#WATCH | PM Narendra Modi attended a millet-exclusive lunch at the Parliament House, earlier today#InternationalYearOfMillets2023 pic.twitter.com/bjIhP8extO
— ANI (@ANI) December 20, 2022
ಇದನ್ನೂ ಓದಿ: ರಾಗಿದೋಸೆ, ಸಜ್ಜೆ-ಜೋಳದ ಕಿಚಡಿ: ಕೇಂದ್ರ ಸಚಿವ ತೋಮರ್ ರಿಂದ ಸಂಸದರಿಗೆ 'ಸಿರಿಧಾನ್ಯ' ಔತಣಕೂಟ
ಈ ಕುರಿತ ಫೋಟೋಗಳನ್ನು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, 2023 ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಗುರುತಿಸಲು ತಯಾರಿ ನಡೆಸುತ್ತಿರುವಾಗ, ಸಂಸತ್ತಿನಲ್ಲಿ ಸಿರಿಧಾನ್ಯಗಳಿಂದ ಮಾಡಿದ ಭೋಜನಕೂಟದಲ್ಲಿ ಭಾಗವಹಿಸಿದ್ದೇವೆ. ಪಕ್ಷಾತೀತವಾಗಿ ಇಂತಹ ಕೂಟದಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ.
As we prepare to mark 2023 as the International Year of Millets, attended a sumptuous lunch in Parliament where millet dishes were served. Good to see participation from across party lines. pic.twitter.com/PjU1mQh0F3
— Narendra Modi (@narendramodi) December 20, 2022
ರಾಜಸ್ಥಾನದ ಅಲ್ವಾರ್ ನಲ್ಲಿ ಖರ್ಗೆ ಮಾಡಿದ ಟೀಕೆಗಳ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರು ಪರಸ್ಪರ ಕಿಡಿಕಾರಿದ ನಂತರ ನಡೆದ ಭೋಜನಕೂಟ ತೀವ್ರ ಕುತೂಹಲ ಮೂಡಿಸಿತು.
ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿಕೆ ನೀಡಿದ್ದರು. ಈ ಹೇಳಿಕೆ ಸಂಸತ್ತಿನಲ್ಲಿ ಮಂಗಳವಾರ ತೀವ್ರ ಗದ್ದಲವನ್ನು ಸೃಷ್ಟಿಸಿತು.