ತಮಿಳು ನಾಡು: ಥೇಣಿ ಜಿಲ್ಲೆಯ ಕುಮುಲಿ ಪರ್ವತ ಪ್ರದೇಶ ಬಳಿ ಆಳವಾದ ಕಂದಕಕ್ಕೆ ಕಾರು ಬಿದ್ದು 8 ಮಂದಿ ಅಯ್ಯಪ್ಪ ಭಕ್ತರು ಸಾವು

ಶಬರಿಮಲೆಯಿಂದ ಭಕ್ತರು ವಾಪಸಾಗುತ್ತಿದ್ದ ವೇಳೆ ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳು ನಾಡಿನ ಥೇಣಿ ಜಿಲ್ಲೆಯಲ್ಲಿ ನಡೆದಿದೆ.
ಕಂದಕಕ್ಕೆ ಉರುಳಿಬಿದ್ದ ಕಾರನ್ನು ಹೊರತೆಗೆದಿರುವುದು
ಕಂದಕಕ್ಕೆ ಉರುಳಿಬಿದ್ದ ಕಾರನ್ನು ಹೊರತೆಗೆದಿರುವುದು

ಥೇಣಿ(ತಮಿಳು ನಾಡು):  ಶಬರಿಮಲೆಯಿಂದ ಭಕ್ತರು ವಾಪಸಾಗುತ್ತಿದ್ದ ವೇಳೆ ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳು ನಾಡಿನ ಥೇಣಿ ಜಿಲ್ಲೆಯಲ್ಲಿ ನಡೆದಿದೆ.

ನಿನ್ನೆ ತಡರಾತ್ರಿ ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಕೆ ವಿ ಮುರಳೀಧರನ್ ತಿಳಿಸಿದ್ದಾರೆ. ಗಾಯಗೊಂಡ ಇಬ್ಬರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com