ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಅದು ಯಾರಪ್ಪನ ಸ್ವತ್ತು ಅಲ್ಲ: ಮಾಧುಸ್ವಾಮಿ ಹೇಳಿಕೆಗೆ ಫಡ್ನವೀಸ್ ತಿರುಗೇಟು

ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ಅಪ್ಪನ ಮನೆಯ ಸ್ವತ್ತು ಅಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಹೇಳಿದ್ದಾರೆ
ದೇವೇಂದ್ರ ಫಡ್ನವೀಸ್
ದೇವೇಂದ್ರ ಫಡ್ನವೀಸ್

ದೆಹಲಿ: ಮುಂಬೈ ಮಹಾರಾಷ್ಟ್ರಕ್ಕೆ ಸೇರಿದ್ದು, ಯಾರ ಅಪ್ಪನ ಮನೆಯ ಸ್ವತ್ತು ಅಲ್ಲ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್  ಹೇಳಿದ್ದಾರೆ

ಕಾನೂನು ಸಚಿವ ಜೆ. ಮಧುಸ್ವಾಮಿ ಅವರ ಮುಂಬೈ ಅನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಫಡ್ನವಿಸ್  ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ನಡುವೆಯೇ ಮಧುಸ್ವಾಮಿ ಅವರು ವಿಧಾನಸಭೆಯಲ್ಲಿ ಮಹಾರಾಷ್ಟ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಮಹಾರಾಷ್ಟ್ರ, ಕರ್ನಾಟಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಈ ವಿಷಯದ ಬಗ್ಗೆ ಪತ್ರ ಬರೆಯಲಾಗುವುದು ಎಂದು ಅವರು, ಇಂತಹ ಕೂಗುಮಾರಿಗಳಿಗೆ ಛೀಮಾರಿ ಹಾಕುವಂತೆ ಕೇಂದ್ರ ಸಚಿವ ಶಾ ಅವರಿಗೆ ಮನವಿ ಮಾಡಲಾಗುವುದು ಎಂದು ಅವರು ಹೇಳಿದರು.

ಕರ್ನಾಟಕದ ಸಿಎಂ ಮತ್ತು ಸಚಿವರು ತಮ್ಮ ಹೇಳಿಕೆಗಳಿಂದ ಮಹಾರಾಷ್ಟ್ರದ ಹೆಮ್ಮೆಗೆ ಧಕ್ಕೆ ತಂದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಪ್ರತಿಕ್ರಿಯೆ ಅದೇ ರೀತಿಯಲ್ಲಿ ಇರುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಹೇಳಿದ್ದಾರೆ. ಕರ್ನಾಟಕದ ಕಾನೂನು ಸಚಿವ ಮಾಧು ಸ್ವಾಮಿ ಅವರು ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಅವರು (ಮಹಾರಾಷ್ಟ್ರ ನಾಯಕರು) ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ನಾನು ಆ ಜನರಿಗೆ ಹೇಳಲು ಬಯಸುತ್ತೇನೆ, ಅಂತಹ ಎರಡು ಅಥವಾ ಮೂರು ನಗರಗಳು ದೇಶದಲ್ಲಿ ಕೇಂದ್ರಾಡಳಿತ ಪ್ರದೇಶಗಳಾಗಿ ಮಾಡಬಹುದು. ಅದರಲ್ಲಿ ಮುಂಬೈ ಅಗ್ರಸ್ಥಾನದಲ್ಲಿದೆ. ಮುಂಬೈ ಅಥವಾ ಬಾಂಬೆ ಪ್ರೆಸಿಡೆಂಟ್ ಆಗಿದ್ದಾಗ ಅದು ಕೇಂದ್ರಾಡಳಿತ ಪ್ರದೇಶದಂತಿತ್ತು. ಆ ಜನರಿಗೆ ದೇಶದ ಒಳಿತನ್ನು ಬೇಕಿದ್ದರೆ ದೊಡ್ಡ ಮನಸ್ಸು ಮಾಡಿ ಬಾಂಬೆಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡುವುದಾಗಿ ಘೋಷಿಸಿ ಎಂದು ಮಾಧುಸ್ವಾಮಿ ಹೇಳಿದ್ದರು.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ನಮ್ಮ ಭೂಮಿಯಲ್ಲಿ ಒಂದು ಇಂಚು ಕೂಡ ನಾವು ಕೊಡುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಸಚಿವ ಸುಧಾಕರ್‌ ಹಾಗೂ ಮಾಧುಸ್ವಾಮಿ ಪೂರಕವಾಗಿ ಮಾತನಾಡಿದ್ದರು. ಬುಧವಾರ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾತನಾಡಿದ ಫಡ್ನವೀಸ್, ರಾಜ್ಯದ ಭಾವನೆಗಳನ್ನು ಕರ್ನಾಟಕ ಸರ್ಕಾರ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ತಿಳಿಸಲಾಗುವುದು ಎಂದು ಹೇಳಿದರು.

ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಅವರು ಕರ್ನಾಟಕದ ಸಚಿವರ ಹೆಸರನ್ನು ಪ್ರಸ್ತಾಪಿಸಿ ವಿಷಯ ಪ್ರಸ್ತಾಪಿಸಿದ್ದರು. ಬಿಜೆಪಿ ಲಕ್ಷ್ಮಣ್ ಸವದಿ ಅವರು ಮುಂಬೈ ಕರ್ನಾಟಕಕ್ಕೆ ಸೇರಿದ್ದು, ಎಂದು ಹೇಳಿ ಮರಾಠಿ ಜನರ ಗಾಯದ ಮೇಲೆ ಉಪ್ಪು ಸವರಿದ್ದಾರೆ ಎಂದು ಅವರು ಹೇಳಿದ್ದಾರೆ. ಈ ತಿಂಗಳ ಆರಂಭದಲ್ಲಿ ಅಮಿತ್ ಶಾ ಅವರೊಂದಿಗೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ನಡುವೆ ನಡೆದ ಸಭೆಯಲ್ಲಿ ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವಾಗ ಯಾವುದೇ ಪಕ್ಷಗಳು ಯಾವುದೇ ಹೊಸ ಹಕ್ಕುಗಳನ್ನು ನೀಡುವುದಿಲ್ಲ ಎಂದು ನಿರ್ಧರಿಸಲಾಯಿತು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com